ವಿದ್ಯಾರ್ಥಿಗಳು ದೊಡ್ಡ ಕನಸು ಇಟ್ಟುಕೊಂಡು ಸಾಧನೆ ಮಾಡಬೇಕು : ಡಾ. ಅರವಿಂದ
ಬೆಳಗಾವಿ, 13: ವಿದ್ಯಾರ್ಥಿ ಗಳು ತಮ್ಮ ಜೀವನದಲ್ಲಿ ದೊಡ್ಡ ಕನಸು ಇಟ್ಟುಕೊಂಡು ಸಾಧನೆ ಮಾಡಬೇಕು ಎಂದು ಬೆಳಗಾವಿ ರಂಗಸಂಪದ ಅಧ್ಯಕ್ಷ ಡಾ.ಅರವಿಂದ ಕುಲಕಣರ್ಿ ಹೇಳಿದರು.
ನಗರದ ಭರತೇಶ ಹೋಮಿ ಯೋಪತಿಕ್ ವೈದ್ಯಕೀಯ ಕಾಲೇಜಿನಲ್ಲಿ ಭಾನುವಾರ ವಿದ್ಯಾಪೋಷಕ ಸಂಸ್ಥೆ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಧನ ಸಹಾಯ ಕಾರ್ಯಕ್ರಮದಲ್ಲಿ
ಮಾತನಾಡಿದರು.
ಸಮಯಪ್ರಜ್ಞೆ ಇಟ್ಟುಕೊಂಡು ಸಾಧನೆಯ ಹಾದಿಯಲ್ಲಿ ಸಾಗಬೇಕು. ವಿದ್ಯಾರ್ಥಿ ಜೀವನ ಅತ್ಯಮೂಲ್ಯವಾಗಿದ್ದು ಆ ಅವಧಿಯನ್ನು ವ್ಯರ್ಥಗೊಳಿಸದೇ ದೊಡ್ಡ ಸಾಧನೆಯ ಕನಸು ಕಾಣಬೇಕು ಎಂದರು.
ವಿದ್ಯಾಪೋಷಕ ಸಂಸ್ಥೆಯ ಧನಸಹಾಯ ಪಡೆದು ಸದ್ಯ ಧಾರವಾಡದಲ್ಲಿ ಕೆಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಭೀಮಪ್ಪ ಲಾಳಿ ಮಾತನಾಡಿ, ಭವಿಷ್ಯದಲ್ಲಿ ನೀವು ಮಾಡುವ ಉದ್ಯೋಗದಲ್ಲಿ ಶ್ರದ್ದೆಯಿಟ್ಟು ಕೆಲಸ ಮಾಡಿ ಎಂದರು.
ಭರತೇಶ ಶಿಕ್ಷಣ ಸಂಸ್ಥೆ ಕಾರ್ಯದಶರ್ಿ ರಾಜೀವ ದೊಡ್ಡಣ್ಣವರ ಮಾತನಾಡಿ, ಇಂದು ವಿದ್ಯಾರ್ಥಿಗಳು ಎಂಜಿನಿಯರಿಂಗ್ ಶಿಕ್ಷಣದತ್ತ ಹೆಚ್ಚು ಗಮನಹರಿಸುತ್ತಿದ್ದಾರೆ. ಇದರೊಂದಿಗೆ ನಾಗರಿಕ ಸೇವಾ ಪರೀಕ್ಷೆ ಬರೆಯುವತ್ತ ಹೆಚ್ಚಿನ ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.
ಭರತೇಶ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಶ್ರೀಕಾಂತ ಕೊಂಕಣಿ, ದಾನಿಗಳಾದ ಮಡಿವಾಳಪ್ಪ ಮೆಳವಂಕಿ, ರಮೇಶ ಗಂಗೂರ, ದಯಾನಂದ ಗಂಗೂರ ಉಪಸ್ಥಿತರಿದ್ದರು.
ಧನಸಹಾಯ ಪಡೆದ ಅನಿಲ್, ಸುಕನ್ಯಾ, ಪ್ರಿಯಾಂಕಾ ಅನಿಸಿಕೆ ಹಂಚಿಕೊಂಡರು.
ವಿದ್ಯಾ ಹಾಗೂ ಸಂಗಡಿಗರು ಪ್ರಾರ್ಥಿ ಸಿದರು.
ರತ್ನಾ ಪಾಟೀಲ, ಪ್ರಸನ್ನ ಪಾಶ್ಚಾಪುರ ನಿರೂಪಿಸಿದರು. ಗೌರಿ ಕಾಂಬಳೆ ವಂದಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 