ವಿದ್ಯಾರ್ಥಿಗಳು ವ್ಯವಹಾರ ಕೌಶಲ್ಯ ಬೆಳೆಸಿಕೊಳ್ಳಬೇಕು: ದಾನವಾಡೆ
Students should develop business skills: Danavade
ಬೆಳಗಾವಿ 13: “ ವಿದ್ಯಾರ್ಥಿಗಳು ಕೇವಲ ಶಾಲೆ ಕಲಿತರೆ ಸಾಲದು ; ವ್ಯವಹಾರ ಕೌಶಲ್ಯ ಜ್ಞಾನ-ಬೆಳೆಸಿಕೊಳ್ಳಬೇಕು. ಪರಿಶ್ರಮ, ನಿಷ್ಠೆ, ಛಲದಿಂದ ದುಡಿದು ಸಾಧನೆ ಮಾಡಬೇಕು. ತುಂಬಾ ಕಡಿಮೆ ಶಿಕ್ಷಣ ಪಡೆದ ಹಾಗೂ ಬಡವನಾದ ನಾನು ಇಂದು ಜಗತ್ತಿನ ಬೇರೆ ಬೇರೆ ದೇಶಗಳಿಗೆ ಯಂತ್ರದ ಬಿಡಿ ಭಾಗಗಳನ್ನು ರಫ್ತು ಮಾಡುತ್ತಿದ್ದು, ದೇಶದ ಬೆಳವಣಿಗೆಗೆ ಪೂರಕವಾಗಿ ಸೇವೆ ಸಲ್ಲಿಸುತ್ತಿದ್ದೇನೆ.” ಎಂದು ಜೈನ ಎಂಜಿನಿಯರಿಂಗ್ ಕಂಪನಿಯ ಮಾಲಿಕ ಅಶೋಕ ದಾನವಾಡೆ ನುಡಿದರು. ಅವರು ಇಲ್ಲಿಯ ಎಸ್.ಪಿ.ಎಚ್.ಭರತೇಶ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಆಯೋಜಿಸಿದ ಆಹಾರ ಮೇಳ, ಕಲಾಪ್ರದರ್ಶನ ಹಾಗೂ ಪಠ್ಯೇತರ ಸ್ಪರ್ಧೆಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಅಪ್ಪಾಸಾಹೇಬ ಚೌಗುಲೆ ಅತಿಥಿಗಳಾಗಿ ಆಗಮಿಸಿದ್ದರು. ಎ.ಎ.ಸನದಿ ಸ್ವಾಗತಿಸಿದರು. ಮುಖ್ಯಾಧ್ಯಾಪಕ ಭರತೇಶ ಮಾರಣಬಸರಿ ಅಧ್ಯಕ್ಷತೆ ವಹಿಸಿದ್ದರು. 9 ನೇ ತರಗತಿ ವಿದ್ಯಾರ್ಥಿಗಳಾದ ಕುಮಾರಿ ಅದಿತಿ ಕಾಕತಿಕರ ಮತ್ತು ಶ್ರೇಯಾ ಯಮ್ಮಿ ನಿರೂಪಿಸಿದರೆ, ಕುಮಾರ ಅಯಾನ ಮುಲ್ಲಾ ವಂದಿಸಿದರು.
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ 