ದೇಶಕ್ಕೆ ಸುಭಾಷ್ ಚಂದ್ರ ಬೋಸ್ ಕೊಡುಗೆ ಅಪಾರ : ಪ್ರಧಾನಿ ಮೋದಿ
ಕೋಲ್ಕತಾ/ನವದೆಹಲಿ, ಜ 23, ದೇಶಾದ್ಯಂತ ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 123ನೇ ಜನ್ಮದಿನ ಆಚರಿಸಲಾಗುತ್ತಿದ್ದು, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಧೈರ್ಯ ಮತ್ತು ದೇಶಕ್ಕಾಗಿ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗದು ಭಾರತೀಯರ ಪ್ರಗತಿ ಮತ್ತು ಯೋಗಕ್ಷೇಮಕ್ಕಾಗಿ ಟೊಂಕಕಟ್ಟಿ ನಿಂತ ಅವರಿಗೆ ಜನತೆ ಕೃತಜ್ಞರಾಗಿರಬೇಕು ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.1897 ಜನವರಿ 23 ರಂದು ಸುಭಾಷರ ಜನನದ ಕುರಿತು, ಜಾನಕಿನಾಥ್ ಬೋಸ್ ತಮ್ಮ ದಿನಚರಿಯಲ್ಲಿ "ಮಧ್ಯಾಹ್ನ ಒಬ್ಬ ಮಗ ಜನಿಸಿದನು" ಎಂದು ಬರೆದಿದ್ದಾರೆ. ಈ ಮಗ ಒಬ್ಬ ಧೀರ ಸ್ವಾತಂತ್ರ್ಯ ಹೋರಾಟಗಾರ ಮತ್ತು ಚಿಂತಕನಾದರು. ಅವರು, ತಮ್ಮ ಜೀವನವನ್ನು ಒಂದು ಭಾರತದ ಸ್ವಾತಂತ್ರ್ಯವೆಂಬ ದೊಡ್ಡ ಕಾರಣಕ್ಕಾಗಿ ಮೀಸಲಿಟ್ಟರು ಎಂದಿರುವ ಮೋದಿ, ನೇತಾಜಿಯವರ ಜಯಂತಿಯನ್ನು ಹೆಮ್ಮೆಯಿಂದ ಸ್ಮರಿಸುವುದಾಗಿ ತಿಳಿಸಿದ್ದಾರೆ. ಬೋಸ್ ಜನ್ಮದ ದಿನದ ಅಂಗವಾಗಿ ಪಶ್ಚಿಮ ಬಂಗಾಳ ಸರ್ಕರ ರಾಜ್ಯಾದ್ಯಂತ ‘ಸುಭಾಷ್ ಉತ್ಸವ’ ಆಯೋಜಿಸಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಟ್ವಿಟರ್ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 