ದೇಶಕ್ಕೆ ಸುಭಾಷ್ ಚಂದ್ರ ಬೋಸ್ ಕೊಡುಗೆ ಅಪಾರ : ಪ್ರಧಾನಿ ಮೋದಿ
ಕೋಲ್ಕತಾ/ನವದೆಹಲಿ, ಜ 23, ದೇಶಾದ್ಯಂತ ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 123ನೇ ಜನ್ಮದಿನ ಆಚರಿಸಲಾಗುತ್ತಿದ್ದು, ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಧೈರ್ಯ ಮತ್ತು ದೇಶಕ್ಕಾಗಿ ಅವರು ನೀಡಿದ ಕೊಡುಗೆಯನ್ನು ಎಂದಿಗೂ ಮರೆಯಲಾಗದು ಭಾರತೀಯರ ಪ್ರಗತಿ ಮತ್ತು ಯೋಗಕ್ಷೇಮಕ್ಕಾಗಿ ಟೊಂಕಕಟ್ಟಿ ನಿಂತ ಅವರಿಗೆ ಜನತೆ ಕೃತಜ್ಞರಾಗಿರಬೇಕು ಎಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.1897 ಜನವರಿ 23 ರಂದು ಸುಭಾಷರ ಜನನದ ಕುರಿತು, ಜಾನಕಿನಾಥ್ ಬೋಸ್ ತಮ್ಮ ದಿನಚರಿಯಲ್ಲಿ "ಮಧ್ಯಾಹ್ನ ಒಬ್ಬ ಮಗ ಜನಿಸಿದನು" ಎಂದು ಬರೆದಿದ್ದಾರೆ. ಈ ಮಗ ಒಬ್ಬ ಧೀರ ಸ್ವಾತಂತ್ರ್ಯ ಹೋರಾಟಗಾರ ಮತ್ತು ಚಿಂತಕನಾದರು. ಅವರು, ತಮ್ಮ ಜೀವನವನ್ನು ಒಂದು ಭಾರತದ ಸ್ವಾತಂತ್ರ್ಯವೆಂಬ ದೊಡ್ಡ ಕಾರಣಕ್ಕಾಗಿ ಮೀಸಲಿಟ್ಟರು ಎಂದಿರುವ ಮೋದಿ, ನೇತಾಜಿಯವರ ಜಯಂತಿಯನ್ನು ಹೆಮ್ಮೆಯಿಂದ ಸ್ಮರಿಸುವುದಾಗಿ ತಿಳಿಸಿದ್ದಾರೆ. ಬೋಸ್ ಜನ್ಮದ ದಿನದ ಅಂಗವಾಗಿ ಪಶ್ಚಿಮ ಬಂಗಾಳ ಸರ್ಕರ ರಾಜ್ಯಾದ್ಯಂತ ‘ಸುಭಾಷ್ ಉತ್ಸವ’ ಆಯೋಜಿಸಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಟ್ವಿಟರ್ ಮೂಲಕ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 