ಮೋದಿ ಸರ್ಕಾರದ ಆರ್ಥಿಕ ನೀತಿಗಳ ವಿರುದ್ಧ ಸುಬ್ರಹ್ಮಣ್ಯನ್ ಸ್ವಾಮಿ ವಾಗ್ದಾಳಿ
ನವದೆಹಲಿ ಅ, 14: ನರೇಂದ್ರ ಮೋದಿ ನೇತೃತ್ವದ ಆರ್ಥಿಕ ನೀತಿಗಳ ನಿರಂತವಾಗಿ ವಾಗ್ದಾಳಿ ಮಾಡುತ್ತಿರುವ ಸ್ವಪಕ್ಷಿಯರೇ ಆದ ಬಿಜೆಪಿ ಹಿರಿಯ ಮುಖಂಡ ಡಾ. ಸುಬ್ರಹ್ಮಣ್ಯನ್ ಸ್ವಾಮಿ ಆರ್ಥಿಕ ಕುಸಿತ ಇಲ್ಲ ಎಂದು ನಿರಾಕರಿಸುತ್ತಿರುವ ಸಚಿವರಿಗೆ ವಿವೇಚನೆಯೂ ಇಲ್ಲ ದೂರದೃಷ್ಟಿಯೂ ಇಲ್ಲ ಎಂದು ಬಲವಾಗಿ ಟೀಕಿಸಿದ್ದಾರೆ. " ಬಟ್ಟೆ ಧರಿಸದಿರುವುದು [ನಗ್ನತೆ] ಯಾರಿಗೆ ಕಾಣಿಸುತ್ತಿಲ್ಲವೋ ಅಂತಹವರ ಹೇಳಿಕೆ ಕೂಡಾ ಅನಗತ್ಯ ಮತ್ತು ಅಪ್ರಸ್ತುತವಾಗುತ್ತದೆ " ಎಂದು ಅವರು ಟ್ವೀಟರ್ ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. ದೇಶದ ಆರ್ಥಿಕ ಸಂಕಷ್ಟ ಹೆಚ್ಚಾಗುತ್ತಿದ್ದು ಗ್ರಾಹಕ ಬೇಡಿಕೆ ಗಣನೀಯವಾಗಿ ಕುಸಿದಿದೆ ಎಂದು ಅರ್ಬಿಐ ಅಂಕಿ ಅಂಶಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ವರದಿ ಮಾಡಿದ ಬೆನ್ನಲ್ಲೆ ಸ್ವಾಮಿ ಅವರು ಹೇಳಿಕೆ ಹೊರಬಿದ್ದಿದೆ . ದೇಶದಲ್ಲಿ ಆರ್ಥಿಕ ಹಿಂಜರಿತ ಇಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅಲ್ಲಗಳೆದ ಕೆಲವೇ ಗಂಟೆಗಳ ಅವಧಿಯಲ್ಲಿ ಸ್ವಾಮಿ ಅವರು ಮೋದಿ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ಮಾಡಿದ್ದಾರೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 