ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕೆ ಸಹಾಯಧನ: ಅರ್ಜಿ ಆಹ್ವಾನ
Subsidy for control of arecanut leaf spot disease: Applications invited
ಲೋಕದರ್ಶನ ವರದಿ
ಮುಂಡಗೋಡ 30 : 2026-27ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅಡಿಕೆ ಬೆಳೆಗೆ ತಗಲುವ ಎಲೆ ಚುಕ್ಕೆ ರೋಗ ನಿಯಂತ್ರಣಕ್ಕಾಗಿ ಓಷಧಿ ಖರೀದಿಸಿದ ರೈತರಿಗೆ ಸಹಾಯಧನ ನೀಡಲು ಮುಂಡಗೋಡ ತೋಟಗಾರಿಕೆ ಇಲಾಖೆ ಅರ್ಜಿ ಆಹ್ವಾನಿಸಿದೆ. ಯೋಜನೆಯಡಿ ಓಷಧಿ ಖರೀದಿಸಿದ ರೈತರಿಗೆ ಪ್ರತಿ ಹೆಕ್ಟರಿಗೆ ರೂ.1,500ರಂತೆ ಗರಿಷ್ಠ 2 ಹೆಕ್ಟರ್ವರೆಗೆ ಶೇ.35ರಷ್ಟು ಸಹಾಯಧನ ನೀಡಲಾಗುವುದು.
ಅರ್ಹ ರೈತರು ಅಗತ್ಯ ದಾಖಲೆಗಳೊಂದಿಗೆ ಮುಂಡಗೋಡ ತೋಟಗಾರಿಕೆ ಇಲಾಖೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಜೇಷ್ಠತೆ, ಲಭ್ಯವಿರುವ ಅನುದಾನ ಹಾಗೂ ಸರ್ಕಾರದ ಮಾರ್ಗಸೂಚಿಗಳ ಅನುಸಾರ ಪ್ರಸಕ್ತ ಸಾಲಿನ ಕಾರ್ಯಾದೇಶಗಳನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಬಂಧಿತ ಗ್ರಾಮ ಪಂಚಾಯಿತಿಗಳ ಕೃಷಿ ಸಖಿಯರನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಕೃಷ್ಣಾ ಟಿ. ಕುಳ್ಳೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 