ವಿದ್ಯಾರ್ಥಿಗಳು ಜೀವನದ ಸವಾಲು ಎದುರಿಸಿ ಮುನ್ನಡೆದಾಗ ಯಶಸ್ಸು ಸಾಧ್ಯ - ಚನ್ನವೀರ ಸ್ವಾಮಿಗಳು
Success is possible when students face life's challenges and move forward - Channaveera Swamy
ಲಕ್ಷ್ಮೇಶ್ವರ" 15 : ವಿದ್ಯಾರ್ಥಿಗಳು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬರುವ ಎಲ್ಲಾ ಸವಾಲುಗಳನ್ನು ಎದುರಿಸಿ ಮುನ್ನಡೆದಾಗ ಮಾತ್ರ ಜೀವನದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಚನ್ನವೀರ ಮಹಾಸ್ವಾಮಿಗಳು ವಿರಕ್ತಮಠ ಹೂವಿನಶಿಗ್ಲಿ ಹೇಳಿದರು. ಅವರು ಭಾನುವಾರ ಶಿಗ್ಲಿ ಗ್ರಾಮದ ಶಾಖಾಂಬರಿ ಸಮುದಾಯ ಭವನದಲ್ಲಿ ನಡೆದ ವೀರರಾಣಿ ಕಿತ್ತೂರು ಚನ್ನಮ್ಮ ವಿವಿಧೋದ್ದೇಶಗಳ ಸಂಘ ರಿ. ಇವರ ಸಹಯೋಗದಲ್ಲಿ ನಡೆದ 2025-26- ನೇ ಸಾಲಿನ ಎಲ್ಲಾ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿವಿಧ ರಂಗದಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಪಂಚಮಸಾಲಿ ಶಿಗ್ಲಿ ಗ್ರಾಮ ಘಟಕ ಪಂಚಮಸಾಲಿ ಸಮಾಜದ ನೌಕರರ ಸಂಘದ ಉದ್ಘಾಟನಾ ಸಮಾರಂಭದದಿವ್ಯ ಸಾನಿಧ್ಯವನ್ನು ವಹಿಸಿ ಅವರು ಮಾತನಾಡುತ್ತಿದ್ದರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದ ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಈರಣ್ಣ ಕರಿಬಿಸ್ಟಿ ಅವರು ಮಾತನಾಡಿ ವಿದ್ಯಾರ್ಥಿಗಳು ಏನನ್ನಾದರೂ ಸಾಧಿಸಬೇಕಾದರೆ ಅದು ಉತ್ತಮ ವಿದ್ಯಾಭ್ಯಾಸದಿಂದಲೇ ಮಾತ್ರ ಸಾಧ್ಯ ಅದಕ್ಕಾಗಿ ಶಿಗ್ಲಿ ಗ್ರಾಮ ವಿದ್ಯಾಭ್ಯಾಸಕ್ಕೆ ಹೆಚ್ಚು ಪ್ರಸಿದ್ಧಿಯನ್ನು ಪಡೆದಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 