ಕಾರ ಮೇಲೆ ಕಬ್ಬಿನ ಟ್ರ್ಯಾಕ್ಟರ್ ಮಗುಚಿ ಬಿದ್ದು ಯುವಕ ಸಾವು
ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ
ಕಾರ ಮೇಲೆ ಕಬ್ಬಿನ ಟ್ರ್ಯಾಕ್ಟರ್ ಮಗುಚಿ ಬಿದ್ದು ಯುವಕ ಸಾವು
ಬೆಳಗಾವಿ 25: ಚಲಿಸುತ್ತಿದ್ದ ಕಾರಿನ ಮೇಲೆ ಕಬ್ಬು ತುಂಬಿಕೊಂಡು ಹೊರಟಿದ್ದ ಟ್ರಾಕ್ಟರ್ ಮಗುಚಿ ಭೀಕರ ದುರ್ಘಟನೆ ಸೋಮವಾರ ಸುವರ್ಣ ವಿಧಾನಸೌಧದ ಬಳಿ ನಡೆದಿದೆ.
ಹುಬ್ಬಳ್ಳಿಯ ಗೀರೀಶ್ ಕುಲಕರ್ಣಿ (24)ಮೃತಪಟ್ಟ ಯುವಕನಾಗಿದ್ದಾನೆ. ಪ್ರಥಮ್ ಮತ್ತು ಇನ್ನೊಬ್ಬ ಗೀರೀಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರು ಸ್ನೇಹಿತರು ಹುಟ್ಟು ಹಬ್ಬ ಆಚರಣೆ ಮುಗಿಸಿ ಹುಬ್ಬಳ್ಳಿಗೆ ಕಾರಿನಲ್ಲಿ ವಾಪಸ್ ಆಗುತ್ತಿದ್ದರು. ಈ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಕಬ್ಬು ಓವರ್ ಲೋಡ್ನಿಂದ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಪಕ್ಕದಲ್ಲಿ ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದಿದೆ. ಇದರಿಂದಾಗಿ ಕಾರಿನಲ್ಲಿ ಹೋಗುತ್ತಿದ್ದವರ ಪೈಕಿ ಒಬ್ಬ ಸ್ಥಳದಲ್ಲಿ ಮೃತಪಟ್ಟರೆ ಇನ್ನಿಬ್ಬರು ಗಂಭೀರವಾಗಿ ಗಾಯ ಗೊಂಡಿದ್ದಾರೆ. ಹಿರೇಬಾಗೇವಾಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರೀಶೀಲನೆ ನಡೆಸಿದ್ದಾರೆ.
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ 