ಸುಣಧೋಳಿ ಜಡಿಸಿದ್ದೇಶ್ವರ ಜಾತ್ರೆ: ಹಗ್ಗವಿಲ್ಲದ ರಥೋತ್ಸವ
ಮೂಡಲಗಿ 24: ಸಮೀಪದ ಸುಣಧೋಳಿ ಗ್ರಾಮದ ಪವಾಡ ಪುರುಷ ಜಡಿಸಿದ್ದೇಶ್ವರ ಜಾತ್ರೆಯು ಪೀಠಾಧಿಪತಿಗಳಾದ ಶಿವಾನಂದ ಸ್ವಾಮಿಜಿಯವರ ಸಾನಿಧ್ಯದಲ್ಲಿ ಜನಸಾಗರ ಮಧ್ಯ ಮಂಗಳವಾರ ಸಂಭ್ರಮ ಸಡಗರದಿಂದ ಜರುಗಿತು.
ಜಾತ್ರೆಯ ಅಂಗವಾಗಿ ಬೆಳಿಗ್ಗೆ ಜಡಿಸಿದ್ದೇಶ್ವರ ಸನ್ನಿಧಿಗೆ ವಿಶೇಷ ಪೂಜೆ, ಅಭಿಷೇಕಗಳು ಜರುಗಿದವು.
ಸಂಜೆ ಜಡಿಸಿದ್ದೇಶ್ವರ ಹಗ್ಗವಿಲ್ಲದ ರಥೋತ್ಸವವೂ ಜನಸ್ತೋಮದ ನಡುವೆ ಪ್ರತಿವರ್ಷದಂತೆ ದೇವಸ್ಥಾನದಿಂದ ಜಡಿಸಿದ್ದೇಶ್ವರರ ಮೂತರ್ಿಯನ್ನು ತಂದು ರಥದಲ್ಲಿ ಪ್ರತಿಷ್ಠಾಪಿಸಿದರು. ಸುಣಧೋಳಿ ಸೇರಿದಂತೆ ಸುತ್ತಮುತ್ತಲಿನ ಹಲವಾರು ಗ್ರಾಮಗಳಿಂದ ಆಗಮಿಸಿದ್ದ ವಿವಿಧ ಗ್ರಾಮಗಳ ದೇವರುಗಳ ಪಲ್ಲಕ್ಕಿಗಳು ಸೇರುವುದರೊಂದಿಗೆ ವಾಲಗ, ಶಹನಾಯಿ, ತಮಟೆ, ಡೊಳ್ಳು ವಿವಿಧ ಭಾರತೀಯ ಸಂಸ್ಕೃತಿಯ ಸಂಗೀತದ ನಾದಗಳ ಮಧ್ಯ ಸಾವಿರಾರು ಭಕ್ತರ ಮುಗಿಲು ಮುಟ್ಟುವ 'ಹರಹರ ಮಹಾದೇವ' ಎಂಬ ಘೋಷಣೆ ಕೇಳುತ್ತಿದಂತೆ ಪವಾಡ ಪುರುಷ ಜಡಿಸಿದ್ದೇಶ್ವರ ತೇರು ಹಗ್ಗವಿಲ್ಲದೇ ಚಲಿಸಿ ಮರಳಿ ತನ್ನ ಸ್ಥಾನಕ್ಕೆ ಬಂದು ನಿಂತಿತು.
ರಥದ ಮೇಲೆ ಭಕ್ತರು ಇಷ್ಟಾನುಸಾರ ತೆಂಗಿನಕಾಯಿ, ಬಾಳೆಹಣ್ಣು, ಖಾರೀಕು, ಬತ್ತಾಸು, ಹಾಗೂ ಹೂವನ್ನು ಸಮಪರ್ಿಸಿ ಕೃತಾರ್ತರಾದರು. ರಾಜ್ಯದ ಮೂಲೆ ಮೂಲೆಯಿಂದ ಆಗಮಿಸಿದ ಹಾಗೂ ಹೊರ ರಾಜ್ಯದಿಂದ ಆಗಮಿಸಿದ ಭಕ್ತರು ಇದಕ್ಕೆ ಸಾಕ್ಷಿಯಾದರು ನಂತರ ಮಹಾಪ್ರಸಾದ ನಡೆಯಿತು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 