ಸಂಡೆ ಸಂಪೂರ್ಣ ಲಾಕ್ ಡೌನ್ : ಕೆಎಸ್ ಆರ್ ಟಿಸಿ, ಬಿಎಂಟಿಸಿ ಸಂಚಾರವಿಲ್ಲ
ಬೆಂಗಳೂರು, ಜು 4: ರಾಜ್ಯದಲ್ಲಿ ಹೆಚ್ಚುತ್ತಿರುವ ಕರೋನಸೋಂಕು ಪ್ರಕರಣ ತಡೆಯಲು ಒಂದು ತಿಂಗಳ ಕಾಲ ಭಾನುವಾರ ಸಂಪೂರ್ಣ ಲಾಕ್ ಡೌನ್ ಜಾರಿಗೊಳಿಸಲು ತೀರ್ಮಾನಿಸಿರುವುದರಿಂದ ನಾಳೆ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಸಂಚಾರವಿರುವುದಿಲ್ಲ.
ಲಾಕ್ಡೌನ್ ಹಿನ್ನೆಲೆಯಲ್ಲಿ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ಸುಗಳ ಕಾರ್ಯಾಚರಣೆಯು ಭಾನುವಾರ ಬೆಳಿಗ್ಗೆಯಿಂದ ಸೋಮವಾರ ಬೆಳಿಗ್ಗೆಯವರೆಗೂ ಇರುವುದಿಲ್ಲ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಜುಲೈ 5ರಿಂದ ( ನಾಳೆಯಿಂದ) ಜಾರಿಯಾಗುವಂತೆ ಆಗಸ್ಟ್ 2ರವರೆಗೆ ಪ್ರತಿ ಭಾನುವಾರ ಸಂಪೂರ್ಣ ಲಾಕ್ಡೌನ್ ಜಾರಿಯಲ್ಲಿ ಇರಲಿದೆ. ಅಗತ್ಯ ಸೇವಾ ಚಟುವಟಿಕೆಗಳು ಹಾಗೂ ಈಗಾಗಲೇ ನಿಗದಿಯಾಗಿರುವ ವಿವಾಹಗಳಿಗೆ ಇದು ಅನ್ವಯವಾಗುದಿಲ್ಲ.
ಸರಕಾರಿ ಕಚೇರಿಗಳು ಜು.10ರಿಂದ ಅನ್ವಯವಾಗುವಂತೆ ಎಲ್ಲ ಸರಕಾರಿ ಕಚೇರಿಗಳು, ಮಂಡಳಿಗಳು ಹಾಗೂ ನಿಗಮಗಳು(ಅಗತ್ಯ ಸೇವೆಗಳನ್ನು ನಿರ್ವಹಿಸುತ್ತಿರುವ ಕಚೇರಿಗಳು ಹೊರತುಪಡಿಸಿ) ಆಗಸ್ಟ್ 2ರವರೆಗೆ ಎಲ್ಲ ಶನಿವಾರವೂ ಮುಚ್ಚಲಿದೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 