ಜನತಾ ಕರ್ಫ್ಯೂ ಬೆಂಬಲಿಸಿ: ಸಚಿವ ರಮೇಶ್ ಜಾರಕಿಹೊಳಿ
ಬೆಂಗಳೂರು, ಮಾ 21, ದೇಶಾದ್ಯಂತ ಕೊರೋನಾ ವೈರಸ್ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರದಂದು ಜನತಾ ಕರ್ಫ್ಯೂ ಆಚರಿಸುವಂತೆ ಕರೆ ನೀಡಿದ್ದು, ಭಾರತದ ಜಾಗೃತ ಪ್ರಜೆಯಾಗಿ, ಸಂಕಲ್ಪ ಹಾಗೂ ಸಂಯಯದಿಂದ ಈ ’ಜನತಾ ಕರ್ಫ್ಯೂ’ ಪಾಲಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಭಾನುವಾರ ಸ್ವಯಂ ಪ್ರೇರಣೆಯಿಂದ ನಡೆಯಲಿರುವ ’ಜನತಾ ಕರ್ಫ್ಯೂ’ವನ್ನು ಬೆಂಬಲಿಸೋಣ. ಈ ಸಂದಿಗ್ಧ ಪರಿಸ್ಥಿತಿಯನ್ನು ಎಲ್ಲರೂ ಒಟ್ಟಾಗಿ, ಧೈರ್ಯದಿಂದ ಎದುರಿಸೋಣ ಮತ್ತು ಭಾರತವನ್ನು ಕೊರೋನಾ ಮುಕ್ತ ರಾಷ್ಟ್ರವಾಗಿ ಮಾಡೋಣ ಎಂದು ತಿಳಿಸಿದ್ದಾರೆ. ನಾವು ಆರೋಗ್ಯವಾಗಿದ್ದರೆ ರಾಷ್ಟ್ರದ ಆರೋಗ್ಯ ಸರಿಯಿರಲಿದೆ. ಕೊರೋನಾ ವೈರಸ್ ಹರಡುವಿಕೆಯಿಂದ ಜನರನ್ನು ತಡೆಗಟ್ಟುವುದು ನಮ್ಮ ಕರ್ತವ್ಯ. ಈ ಹಂತದಲ್ಲಿ 'ಸಾಮಾಜಿಕ ಅಂತರ ' ತುಂಬಾ ಪ್ರಾಮುಖ್ಯ. ಆದ್ದರಿಂದ ಜನತಾ ಕರ್ಫ್ಯೂ ಬೆಂಬಲಿಸಬೇಕು ಎಂದು ಸಚಿವ ರಮೇಶ್ ಜಾರಕಿಹೊಳಿ ಮನವಿ ಮಾಡಿದರು.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 