ನಿರ್ಭಯಾ ಅಪರಾಧಿಯ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್
ನವದೆಹಲಿ, ಮಾ 19, ನಿರ್ಭಯಾ ಅತ್ಯಾಚಾರ ಮತ್ತುಹತ್ಯೆ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ ಎಂಬಾತನ ಮರುಪರಿಶೀಲನಾ ರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಜಾಗೊಳಿಸಿದೆ. ಈತ ತಾನು ಅಪರಾಧ ನಡೆದ ಸಂದರ್ಭದಲ್ಲಿ ಅಪ್ರಾಪ್ತನಾಗಿದ್ದೆ. ಆದ್ದರಿಂದ ತಮಗೆ ವಿಧಿಸಿರುವ ಗಲ್ಲುಶಿಕ್ಷೆಯಿಂದ ವಿನಾಯ್ತಿ ನೀಡಬೇಕು ಎಂದು ಮರುಪರಿಶೀಲನಾ ಅರ್ಜಿಯಲ್ಲಿ ಕೋರಿದ್ದನು. ಮಾರ್ಚ್ 5ರಂದು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಧರ್ಮೇಂದ್ರ ರಾಣಾ ಅವರು ಅಪರಾಧಿಗಳನ್ನು ಮಾ. 20ರಂದು ಬೆಳಗ್ಗೆ 5.30ಕ್ಕೆ ಗಲ್ಲಿಗೇರಿಸುವಂತೆ ನಾಲ್ಕನೇ ಬಾರಿಗೆ ಡೆತ್ ವಾರಂಟ್ ಹೊರಡಿಸಿದ್ದರು. 2012ರ ಡಿ. 16ರಂದು ಚಲಿಸುತ್ತಿದ್ದ ಬಸ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿಯನ್ನು ಸಾಮೂಹಿಕ ಅತ್ಯಾಚಾರ ಮಾಡಿ ಸಾಮೂಹಿಕ ಹತ್ಯೆ ಮಾಡಿದ ಆರೋಪದ ಮೇಲೆ ಮುಖೇಶ್ ಸಿಂಗ್, ಪವನ್ ಕುಮಾರ್ ಗುಪ್ತ, ವಿನಯ್ ಕುಮಾರ್ ಶರ್ಮಾ ಮತ್ತು ಅಕ್ಷಯ್ ಸಿಂಗ್ ಗೆ ಗಲ್ಲುಶಿಕ್ಷೆ ವಿಧಿಸಲಾಗಿದೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 