ಚುನಾಯಿತರಾದ 48 ತಾಸಿನೊಳಗೆ ಅಭ್ಯರ್ಥಿಗಳ ಅಪರಾಧ ಹಿನ್ನಲೆ ಪ್ರಕಟಿಸುವಂತೆ ರಾಜಕೀಯ ಪಕ್ಷಗಳಿಗೆ ರಾಜಕೀಯ ಪಕ್ಷಗಳಿಗೆ ಸುಪ್ರೀಂಕೋರ್ಟ್ ಸೂಚನೆ
ನವದೆಹಲಿ, ಫೆ 13, ವಿಧಾನಸಭೆ ಮತ್ತು ಸಂಸತ್ ಚುನಾವಣೆಗಳಲ್ಲಿ ಚುನಾಯಿತರಾಗುವ ಅಭ್ಯರ್ಥಿಗಳ ಅಪರಾಧ ಹಿನ್ನೆಲೆ ದಾಖಲೆಗಳನ್ನು ಅಭ್ಯರ್ಥಿ ಆಯ್ಕೆಯಾದ 48 ಗಂಟೆಯೊಳಗೆ ಪ್ರಕಟಿಸುವಂತೆ ಎಲ್ಲ ರಾಜಕೀಯ ಪಕ್ಷಗಳಿಗೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ.ಅಪರಾಧ ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕಾರಣಗಳೇನು ಎಂಬ ವಿವರಗಳನ್ನು ರಾಜಕೀಯ ಪಕ್ಷಗಳು ತಮ್ಮ ವೆಬ್ ಸೈಟ್ ನಲ್ಲಿ ಪ್ರಕಟಿಸುವಂತೆ ನ್ಯಾಯಮೂರ್ತಿ ಫಾಲಿ ನಾರಿಮನ್ ನೇತೃತ್ವದ ನ್ಯಾಯಪೀಠ ಸೂಚನೆ ನೀಡಿದೆ.ಈ ಕುರಿತು ವಕೀಲರಾದ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿ, ಸುಪ್ರೀಂಕೋರ್ಟ್ ಈ ತೀರ್ಪು ನೀಡಿದೆ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ಅಪರಾಧ ಪೂರ್ವಾಪರಗಳನ್ನು ಬಹಿರಂಗಪಡಿಸುವುದಕ್ಕೆ ಸಂಬಂಧಿಸಿ ಸರ್ವೋಚ್ಛ ನ್ಯಾಯಾಲಯ 2018 ರ ಸೆಪ್ಟೆಂಬರ್ ನಲ್ಲಿ ನೀಡಿದ್ದ ತೀರ್ಪಿನ ನಿರ್ದೇಶನ ಗಳನ್ನು ರಾಜಕೀಯ ಪಕ್ಷಗಳು ಪಾಲಿಸುತ್ತಿಲ್ಲ ಎಂದು ಅರ್ಜಿದಾರರು ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 