ರಾಷ್ಟ್ರೀಯ ಪೌರತ್ವ ಕಾಯ್ದೆ ಜಾರಿಗೆ ತಡೆ ನೀಡಲು ಸುಪ್ರೀಂ ನಕಾರ
ನವದೆಹಲಿ, ಜ ೨೨ ಪೌರತ್ವ ತಿದ್ದುಪಡಿ ಕಾಯ್ದೆ - ಸಿಎಎ ಹಾಗೂ ರಾಷ್ಟ್ರೀ ಯ ಪೌರತ್ವ ನೋಂದಣಿ- ಎನ್ ಆರ್ ಸಿ ಪ್ರಕ್ರಿಯೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ೧೪೪ ಆರ್ಜಿಗಳ ಸಂಬಂಧ ತಡೆಯಾಜ್ಞೆ ನೀಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್ , ನಾಲ್ಕು ವಾರದೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿದೆ.
ಅಲ್ಲದೆ, ಪೌರತ್ವ ತಿದ್ದುಪಡಿ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ಸಾವಿಂಧಾನಿಕ ಪೀಠ ನಡೆಸಬೇಕು ಎಂದು ಮುಖ್ಯನ್ಯಾಯಮೂರ್ತಿ ಎಸ್ . ಎ. ಬೊಬ್ಡೆ ನೇತೃತ್ವದ ತ್ರಿಸದಸ್ಯ ಪೀಠ ಹೇಳಿದೆ. ಆರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ ಪೀಠ, ಕಾಯ್ದೆಯ ಸಾಂವಿಧಾನಿಕ ಮಾನ್ಯತೆಯನ್ನು ಆರ್ಜಿಗಳು ಪ್ರಶ್ನಿಸಿರುವದರಿಂದ ಸಂವಿಧಾನದ ೧೪೫ (೩) ನೇ ವಿಧಿಯಂತೆ ಈ ಅರ್ಜಿಗಳನ್ನು ಐವರು ನ್ಯಾಯಮೂರ್ತಿಗಳ ವಿಸ್ತೃತ ಸಾವಿಂಧಾನಿಕ ಪೀಠಕ್ಕೆ ವರ್ಗಾಯಿಸುವುದಾಗಿ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 