ಸುಪ್ರೀಂ ತೀಪು ಐತಿಹಾಸಿಕ: ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ
ಕಲಬುರಗಿ, ನ 9 : ಅಯೋಧ್ಯೆ ವಿಚಾರದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀಪು ದೇಶದ ಇತಿಹಾಸದಲ್ಲಿಯೇ ಐತಿಹಾಸಿಕವಾದುದು ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ 130 ಕೋಟಿ ಜನ ಒಪ್ಪುವಂತಹ ತೀಪು ಇದಾಗಿದ್ದು, ನ್ಯಾಯಾಲಯದ ಆದೇಶದಂತೆ ಎಲ್ಲಾ ವ್ಯವಸ್ಥೆಗಳನ್ನು ಭಾರತ ಸರ್ಕಾರ ಮಾಡಬೇಕು ಎಂದರು. ದೇಶದ ಏಕತೆ ಮತ್ತು ಅಖಂಡತೆಯನ್ನು ಉಳಿಸಿ, ಬೆಳೆಸಿಕೊಂಡು ಹೋಗಲು ಈ ತೀಪು ಸಹಕಾರಿಯಾಗಿದೆ. ಎಲ್ಲರೂ ಈ ತೀರ್ಪನ್ನು ಗೌರವಿಸುವ ಮೂಲಕ ಹಿಂದೂ - ಮುಸ್ಲಿಮರು ಅಣ್ಣತಮ್ಮಂದಿರಂತೆ ಬಾಳಬೇಕು ಎಂದರು. ತೀಪು ಯಾರ ಪರ, ವಿರುದ್ಧ ಬಂದರು ಸಂಯಮದಿಂದರಲು ಮನವಿ ಮಾಡಿದ್ದೆವು. ಈಗ ಪ್ರತಿಯೊಬ್ಬರೂ ಸುಪ್ರೀಂ ತೀರ್ಪನ್ನು ಗೌರವಿಸುವ ಮೂಲಕ ಸಮಾಜದಲ್ಲಿ ಶಾಂತಿ ಕದಡದಂತೆ ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು. ಸಂಸದ ಡಾ.ಉಮೇಶ್ ಜಾಧವ್ ಮಾತನಾಡಿ, ಅಯೋಧ್ಯೆ ಸ್ಥಳದ ಕುರಿತು ಸುಪ್ರೀಂಕೋಟ್9 ನೀಡಿರುವ ತೀಪು ಸ್ವಾಗತಾರ್ಹ. ತೀಪು ಬರುವ ಮುನ್ನ, ಸುಪ್ರೀಂ ಕೋರ್ಟ ತೀಪು ಏನೇ ನೀಡಿದರು ಅದನ್ನು ಸ್ವಾಗತಿಸಬೇಕು ಎಂದು ಹೇಳಿದ್ದೆ. ನಮ್ಮ ಜನ ಶಾಂತಿ ಸಂಯಮದಿಂದ ವರ್ತಿಸಬೇಕು ಎಂದು ಕೈಮುಗಿದು ವಿನಂತಿಸಿಕೊಳ್ಳುತ್ತೇನೆ ಎಂದರು. ಕಲಬುರಗಿ ಜಿಲ್ಲೆ ಭಾವೈಕ್ಯತೆಯ ನೆಲ ಎನ್ನುವುದು ಸಾಬೀತು ಪಡಿಸಿ ಎಂದು ಅವರು ಮನವಿ ಮಾಡಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 