ಈರುಳ್ಳಿ ಬೆಳೆ ನೀರಿನಲ್ಲಿ ಹೋಮ ಮನನೊಂದ ರೈತ ನೇಣಿಗೆ ಶರಣು
ಲೋಕದರ್ಶನವರದಿ
ರಾಣೇಬೆನ್ನೂರು22: ಸತತವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಈರುಳ್ಳಿ ಬೆಳೆ ಸಂಪೂರ್ಣ ಹಾನಿಯಾದ ಪರಿಣಾಮ ರೈತನೋರ್ವನು ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ತಾಲೂಕಿನ ನಾಗೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಭವಿಸಿದೆ. ಮೃತ ರೈತನನ್ನು ಅದೇ ಗ್ರಾಮದ ಪ್ರಭು ಸಿದ್ದಪ್ಪ ಮಾಕನೂರು(38) ಎಂದು ಗುರುತಿಸಲಾಗಿದೆ.
ಈತನು ತನ್ನ ಎರಡು ಎಕರೆ ಜಮೀನಿನಲ್ಲಿ ಈರುಳ್ಳಿ ಬೆಳೆ ಬೆಳೆದಿದ್ದನು. ಕಳೆದ ಒಂದು ವಾರಗಳ ಕಾಲ ಸುರಿಯುತ್ತಿರುವ ಮಳೆಯಿಂದಾಗಿ ಈರುಳ್ಳಿ ಬೆಳೆ ನೀರಿನಲ್ಲಿ ಜಲಾವೃತಗೊಂಡು ಸಂಪೂರ್ಣ ನಾಶವಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತಹ ಪರಸ್ಥಿಯನ್ನು ಕಂಡು ಮನನೊಂದು ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 