ರೋಟರಿ ಕ್ಲಬ್ ಮಾಜಿ ಗವರ್ನರ್ ಸೂರ್ಯ ಪ್ರಕಾಶ್ ಭಟ್ ನಿಧನ
ಮಂಗಳೂರು, ಜ 09,ರೋಟರಿ ಕ್ಲಬ್ ಮಾಜಿ ಗವರ್ನರ್ ಸೂರ್ಯ ಪ್ರಕಾಶ್ ಭಟ್ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಅವರಿಗೆ 62 ವರ್ಷ ವಯಸ್ಸಾಗಿತ್ತು ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿರುವ ಮೃತರು, ತೀವ್ರವಾದ ಮಧುಮೇಹದ ಸಮಸ್ಯೆಗಳಿಂದಾಗಿ ಕಳೆದ ಎರಡು ವಾರಗಳಿಂದ ಕೋಮಾದಲ್ಲಿದ್ದರು ಮತ್ತು ಬುಧವಾರ ರಾತ್ರಿ ಕೊನೆಯುಸಿರೆಳೆದರು. ಸಕ್ರಿಯ ರೋಟೇರಿಯನ್ ಆಗಿದ್ದ ಸೂರ್ಯಪ್ರಕಾಶ್ ಭಟ್, ರೋಟರಾಕ್ಟ್ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್ನ ಸಕ್ರಿಯ ಸದಸ್ಯರಾಗಿದ್ದರು. 1989 ರಲ್ಲಿ ರೋಟರಿ ಕ್ಲಬ್ ಆಫ್ ಮಂಗಳೂರಿಗೆ ಸೇರಿದರು. 1995-96ರ ಅವಧಿಯಲ್ಲಿ ಕ್ಲಬ್ ಮಟ್ಟದಲ್ಲಿ ಮತ್ತು ರೋಟರಿ ಜಿಲ್ಲಾ ಕಾರ್ಯದರ್ಶಿ ಸೇರಿದಂತೆ ಜಿಲ್ಲಾ ಮಟ್ಟದಲ್ಲಿ ವಿವಿಧ ಹುದ್ದೆಗಳನ್ನು ಅಲಂಕರಿಸಿದ ನಂತರ, ಅವರು 1999-2000ರಲ್ಲಿ ಸುವರ್ಣ ಮಹೋತ್ಸವ ವರ್ಷದಲ್ಲಿ ಮಂಗಳೂರಿನ ರೋಟರಿ ಕ್ಲಬ್ನ ಅಧ್ಯಕ್ಷರಾದರು. ನಂತರ 2003-04ರಲ್ಲಿ ರೋಟರಿ ಕ್ಲಬ್ನ ಜಿಲ್ಲಾ ಗವರ್ನರ್ ಆಗಿ ಆಯ್ಕೆಯಾದರು. ಪ್ರಸ್ತುತ ಅವರು ರೋಟರಿ ಜಿಲ್ಲಾ ಸಲಹಾ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 