ಬ್ಯಾಂಕ್ ಮ್ಯಾನೇಜರ್ ಮೇಲೆ ಕತ್ತಿಯಿಂದ ಹಲ್ಲೆ
ಮಡಿಕೇರಿ, ನ. 12 : ಬ್ಯಾಂಕ್ ಮ್ಯಾನೇಜರ್ ಮೇಲೆ ವ್ಯಕ್ತಿಯೋರ್ವ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಮಡಿಕೇರಿ ತಾಲೂಕಿನ ಕಡಗದಾಳು ಎಂಬ ಗ್ರಾಮದಲ್ಲಿ ನಡೆದಿದೆ. ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮ್ಯಾನೇಜರ್ ಸತೀಶ್ ಎಂಬವರ ಮೇಲೆ ಗಣಪತಿ ಎಂಬುವವರು ಹಲ್ಲೆ ಮಾಡಿದ್ದಾರೆ. ಆರೋಪಿ ಗಣಪತಿ, ಸತೀಶ್ ಬಳಿ 10 ಸಾವಿರ ರೂ ಸಾಲ ಮಾಡಿಕೊಂಡಿದ್ದರು. 10 ಸಾವಿರ ಪೈಕಿ ಗಣಪತಿ 2,500ರೂ ಉಳಿಸಿಕೊಂಡಿದ್ದರು ಎನ್ನಲಾಗಿದೆ. ಮಾರಾಟಕ್ಕಿಟ್ಟಿದ್ದ ಕತ್ತಿಯಿಂದ ಬ್ಯಾಂಕ್ ನಲ್ಲೇ ಗಣಪತಿ, ಸತೀಶ್ ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಲ್ಲೆಗೊಳಗಾದ ಸತೀಶ್ ಅವರ ತಲೆ ಭಾಗದಲ್ಲಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಗೆ ಸಂಬಂಧಿಸಿತೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 