ಆಂಧ್ರದಲ್ಲಿ ಹಲವೆಡೆ ಭುಗಿಲೆದ್ದ ಪ್ರತಿಭಟನೆ: ಟಿಡಿಪಿ ಸಂಸದನ ಬಂಧನ
ಹೈದರಾಬಾದ್, ಜ 21: ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ ಮಾಡುವ ಸರ್ಕಾರದ ವಿಕೇಂದ್ರಿಕರಣ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸಿದ ಟಿಡಿಪಿ ಸಂಸದ ಜಯದೇವ್ ಗಲ್ಲಾ ಅವರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಅಮರಾವತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪೊಲೀಸರು ಮತ್ತು ಗಲ್ಲಾ ನಡುವೆ ನಡೆದ ಘರ್ಷಣೆಯ ಕಾರಣ ಗಲ್ಲಾ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿದ್ದು,
ಜಯದೇವ್ ಗಲ್ಲಾ ಅವರನ್ನು ಮಂಗಳಾಗಿರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದು, ಇದೇ 31ವರೆಗೆ ಕಸ್ಟಡಿಗೆ ಒಪ್ಪಿಸಲಾಗಿದೆ .
ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಆಂಧ್ರಪ್ರದೇಶ ವಿಕೇಂದ್ರಿಕರಣ ಮಸೂದೆ ಅಂಗೀಕರಿಸಿದ ಕ್ರಮ ವಿರೋಧಿಸಿ ಆಂಧ್ರಪ್ರದೇಶದ ಹಲವೆಡೆ ಪ್ರತಿಭಟನೆ ಭುಗಿಲೆದ್ದಿದೆ.
ಆಂಧ್ರಪ್ರದೇಶ ಮೂರು ಭಾಗ ಮಾಡಿ ಮೂರು ರಾಜಧಾನಿ ಮಾಡುವುದರಿಂದ ರಾಜ್ಯಕ್ಕೆ ಬಹಳ ಆರ್ಥಿಕ ಹೊರೆಯಾಗಲಿದೆ. ಇದನ್ನು ತಡೆಯಲು ಹೋರಾಟ ಮಾಡುತ್ತಿರುವುದಾಗಿ ಸಂಸದ ಜಯದೇವ್ ಗಲ್ಲಾ ಹೇಳಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 