ಆಂಧ್ರದಲ್ಲಿ ಹಲವೆಡೆ ಭುಗಿಲೆದ್ದ ಪ್ರತಿಭಟನೆ: ಟಿಡಿಪಿ ಸಂಸದನ ಬಂಧನ
ಹೈದರಾಬಾದ್, ಜ 21: ಆಂಧ್ರಪ್ರದೇಶಕ್ಕೆ ಮೂರು ರಾಜಧಾನಿ ಮಾಡುವ ಸರ್ಕಾರದ ವಿಕೇಂದ್ರಿಕರಣ ಮಸೂದೆ ವಿರೋಧಿಸಿ ಪ್ರತಿಭಟನೆ ನಡೆಸಿದ ಟಿಡಿಪಿ ಸಂಸದ ಜಯದೇವ್ ಗಲ್ಲಾ ಅವರನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಅಮರಾವತಿಯಲ್ಲಿ ಪ್ರತಿಭಟನೆ ನಡೆಯುತ್ತಿದ್ದ ವೇಳೆ ಪೊಲೀಸರು ಮತ್ತು ಗಲ್ಲಾ ನಡುವೆ ನಡೆದ ಘರ್ಷಣೆಯ ಕಾರಣ ಗಲ್ಲಾ ವಿರುದ್ಧ ಜಾಮೀನು ರಹಿತ ಪ್ರಕರಣ ದಾಖಲಿಸಲಾಗಿದ್ದು,
ಜಯದೇವ್ ಗಲ್ಲಾ ಅವರನ್ನು ಮಂಗಳಾಗಿರಿ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದು, ಇದೇ 31ವರೆಗೆ ಕಸ್ಟಡಿಗೆ ಒಪ್ಪಿಸಲಾಗಿದೆ .
ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ ಆಂಧ್ರಪ್ರದೇಶ ವಿಕೇಂದ್ರಿಕರಣ ಮಸೂದೆ ಅಂಗೀಕರಿಸಿದ ಕ್ರಮ ವಿರೋಧಿಸಿ ಆಂಧ್ರಪ್ರದೇಶದ ಹಲವೆಡೆ ಪ್ರತಿಭಟನೆ ಭುಗಿಲೆದ್ದಿದೆ.
ಆಂಧ್ರಪ್ರದೇಶ ಮೂರು ಭಾಗ ಮಾಡಿ ಮೂರು ರಾಜಧಾನಿ ಮಾಡುವುದರಿಂದ ರಾಜ್ಯಕ್ಕೆ ಬಹಳ ಆರ್ಥಿಕ ಹೊರೆಯಾಗಲಿದೆ. ಇದನ್ನು ತಡೆಯಲು ಹೋರಾಟ ಮಾಡುತ್ತಿರುವುದಾಗಿ ಸಂಸದ ಜಯದೇವ್ ಗಲ್ಲಾ ಹೇಳಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 