ದಕ್ಷಿಣ ಕಾಶ್ಮೀರದಲ್ಲಿ ಭದ್ರತಾ ಪಡೆ ಕಾಯರ್ಾಚರಣೆ : ಮೂವರು ಉಗ್ರರ ಸಾವು
ಶ್ರೀನಗರ, ಫೆ 19, ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಶೋಧ ಕಾಯರ್ಾಚರಣೆಯಲ್ಲಿ ಮೂವರು ಉಗ್ರರು ಕೊಲ್ಲಲ್ಪಟ್ಟಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಉಗ್ರರ ಅಡಗುವಿಕೆ ಬಗ್ಗೆ ಖಚಿತ ಮಾಹಿತಿ ಆಧರಿಸಿ ರಾಷ್ಟ್ರೀಯ ರೈಫಲ್ಸ್, ಜಮ್ಮು ಕಾಶ್ಮೀರ ಪೊಲೀಸರ ವಿಶೇಷ ಕಾಯರ್ಾಚರಣೆ ಗುಂಪು ಮತ್ತು ಸಿ ಆರ್ ಪಿ ಎಫ್ ನಿಂದ ಜಂಟಿಯಾಗಿ ಕನ್ಜಿಬಾಲ್, ಟ್ರಾಲ್ ಮತ್ತು ಪುಲ್ವಾಮಾಗಳಲ್ಲಿ ಬುಧವಾರ ಬೆಳಗಿನ ಜಾವ ಕಾಯರ್ಾಚರಣೆ ನಡೆಸಲಾಯಿತು ಎಂದು ಮೂಲಗಳು ತಿಳಿಸಿವೆ. ಎಲ್ಲ ಹೊರಹೋಗುವ ಮಾರ್ಗಗಳನ್ನು ಬಂದ್ ಮಾಡಿದ್ದು ಭದ್ರತಾ ಪಡೆ ಹಳ್ಳಿಯ ನಿದರ್ಿಷ್ಟ ಪ್ರದೇಶ ಹೊಕ್ಕುವ ಸಂದರ್ಭದಲ್ಲಿ ಉಗ್ರರು ಹಠಾತ್ತನೆ ಸ್ವಯಂಚಾಲಿತ ಆಯುಧಗಳೊಂದಿಗೆ ದಾಳಿ ನಡೆಸಿದ್ದಾರೆ. ಭದ್ರತಾ ಪಡೆ ತಕ್ಕ ಪ್ರತ್ಯುತ್ತರ ನೀಡಿದ್ದು ಈ ಕಾಯರ್ಾಚರಣೆಯಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಇತ್ತೀಚಿನ ವರದಿ ಲಭ್ಯವಾದಾಗ ಕಾಯರ್ಾಚರಣೆ ಇನ್ನೂ ಮುಂದುವರಿದಿತ್ತು. ಯಾವುದೇ ಅಹಿತಕರ ಘಟನೆ ತಡೆಯಲು ಸುತ್ತಮುತ್ತಲ ಪ್ರದೇಶಗಳಲ್ಲಿ ಹೆಚ್ಚುವರಿ ಭದ್ರತಾ ಪಡೆ ಮತ್ತು ಪೊಲೀಸರನ್ನು ನಿಯೋಜಿಸಲಾಗಿದೆ ಎಂದೂ ಸಹ ಮೂಲಗಳು ತಿಳಿಸಿವೆ.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 