ಭಕ್ತರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಕ್ಕಾಗಿ ಟಿಟಿಡಿ ಸಿದ್ದತೆ
ತಿರುಮಲ, ಮೇ ೧೪, ಭಕ್ತರಿಗೆ ತಿರುಪತಿ ತಿಮ್ಮಪ್ಪನ ದರ್ಶನ ಕಲ್ಪಿಸಲು ದೇಗುಲ ನಗರಿ ತಿರುಮಲದಲ್ಲಿ ಸಿದ್ದತೆಗಳು ನಡೆಯುತ್ತಿವೆ. ಈ ತಿಂಗಳ ೨೮ ರಂದು ನಡೆಯಲಿರುವ ಆಡಳಿತ ಮಂಡಳಿ ಸಭೆಯಲ್ಲಿ ಈ ಸಂಬಂಧ ತೀರ್ಮಾನ ಕೈಗೊಳ್ಳುವ ನಿರೀಕ್ಷೆಯಿದೆ. ನಿತ್ಯ ಏಳು ಸಾವಿರ ಮಂದಿಗೆ ಮಾತ್ರ ತಿಮ್ಮಪ್ಪನ ದರ್ಶನ ಕಲ್ಪಿಸುವ ರೀತಿ ವ್ಯವಸ್ಥೆ ಮಾಡಬೇಕು ಎಂಬ ಆಲೋಚನೆಯನ್ನು ಟಿಟಿಡಿ ಹೊಂದಿದೆ. ಭಕ್ತರ ನಡುವೆ ದೈಹಿಕ ಅಂತರ ಕಾಪಾಡಿಕೊಂಡು ದರ್ಶನ ವ್ಯವಸ್ಥೆಗೆ ಏರ್ಪಾಟು ಮಾಡಲಾಗುತ್ತಿದೆ. ಮೊದಲು ಟಿಟಿಡಿ ಉದ್ಯೋಗಿಗಳಿಗೆ ವೆಂಕಟರಮಣನ ದರ್ಶನ ಲಭಿಸಲಿದೆ.ನಂತರ ತಿರುಮಲದಲ್ಲಿ ವಾಸವಾಗಿರುವ ಸ್ಥಳೀಯರಿಗೆ ದರ್ಶನ ಕಲ್ಪಿಸಲಿದ್ದಾರೆ. ಆದರೆ, ಭಕ್ತರು ಪೂರ್ಣ ಪ್ರಮಾಣದಲ್ಲಿ ದೈಹಿಕ ಅಂತರ ಕಾಪಾಡಿಕೊಳ್ಳುವಂತೆ ಸಕಲ ರೀತಿಯ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ.
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ 