ಡೋಣಿ ನದಿ ನೀರಿನ ಮಟ್ಟ ಪರೀಶೀಲಿಸಿದ ತಹಶೀಲ್ದಾರ್ ಡಾ. ಹೂಗಾರ
Tahsildar Dr. Hoogara checked the water level of the Doni River
ಡೋಣಿ ನದಿ ನೀರಿನ ಮಟ್ಟ ಪರೀಶೀಲಿಸಿದ ತಹಶೀಲ್ದಾರ್ ಡಾ. ಹೂಗಾರ
ತಾಳಿಕೋಟಿ 09: ಡೋಣಿ ನದಿಗೆ ಕಳೆದ ಎರಡು ದಿನಗಳಿಂದ ಅಪಾರ ಪ್ರಮಾಣದ ನೀರು ಹರಿದು ಪ್ರವಾಹದ ಪರಿಸ್ಥಿತಿ ಉದ್ಭವಿಸಿ ಕೆಳ ಸೇತುವೆ ಜಲಾವೃತಗೊಂಡು ರಸ್ತೆ ಸಂಚಾರ ಸ್ಥಗಿತವಾಗಿದ್ದ ಹಿನ್ನೆಲೆಯಲ್ಲಿ ತಹಸಿಲ್ದಾರ ಡಾ.ವಿನಯಾ ಹೂಗಾರ ಅವರು ಸ್ಥಳಕ್ಕೆ ಭೇಟಿ ನೀಡಿ ನೀರಿನ ಮಟ್ಟ ಪರೀಶೀಲನೆ ನಡೆಸಿದರು.
ಶುಕ್ರವಾರ ಪಟ್ಟಣದ ಹತ್ತಿರದಲ್ಲಿ ಹರಿಯುವ ಡೋಣಿ ನದಿಯ ತಟಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಅವರು ನೀರಿನ ಮಟ್ಟವನ್ನು ಪರೀಶೀಲಿಸಿದರು. ಇದೇ ರೀತಿಯಾಗಿ ಅವರು ನೀರಿನಿಂದ ಭಾದಿತ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ವರದಿಯನ್ನು ಅಧಿಕಾರಿ ಗಳಿಂದ ಪಡೆದುಕೊಂಡರು. ಸದರಿ ವರದಿಯನ್ನು ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ಕಳಿಸಿದ್ದು ಅವರ ನಿರ್ದೇಶನದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಸಮಯದಲ್ಲಿ ಗ್ರೇಡ್2 ತಹಸಿಲ್ದಾರ್ ಪ್ರದೀಪ ಕೆ.ಎಸ್. ಜಂಟಿ ನಿರ್ದೇಶಕ ತಾಳಿಕೋಟಿ ವಿಪತ್ತು ನಿರ್ವಹಣಾ ನೋಡಲ್ ಅಧಿಕಾರಿ ಶಿವನಗೌಡ ಪಾಟೀಲ, ಸಹಾಯಕ ಕೃಷಿ ಅಧಿಕಾರಿ ಭಾವಿಕಟ್ಟಿ, ಕೃಷಿ ಅಧಿಕಾರಿ ಮಹೇಶ ಜೋಶಿ, ಕಂದಾಯ ನೀರೀಕ್ಷಕ ವಿ.ಜಿ.ಸಿಂದಗಿ, ಗ್ರಾಮ ಆಡಳಿತಾಧಿಕಾರಿಗಳಾದ ಸದಾಶಿವ ಮಾದರ, ಎಸ್.ಎಸ್.ಅಂಗಡಿ, ಪ್ರಶಾಂತ ಶಾಂತಗೇರಿ, ಗ್ರಾಮದ ರೈತ ಶಬ್ಬೀರ ಮುಲ್ಲಾ ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 