ಮಕ್ಕಳ ಆರೋಗ್ಯ ಬಗ್ಗೆ ಕಾಳಜಿ ವಹಿಸಿ
Take care of children's health
ಹೂವಿನ ಹಡಗಲಿ 20: ವಿಶೇಷ ಅಗತ್ಯಯುಳ್ಳ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಎ ಕೋಟೆಪ್ಪ ಹೇಳಿದರು. ಪಟ್ಟಣದ ಸೊಪ್ಪಿನ ವೀರಮ್ಮ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ವತಿಯಿಂದ ಆಯೋಜಿಸಿದ್ದ 2025-26 ನೇ ಸಾಲಿನ ವಿಶೇಷ ಅಗತ್ಯತೆಯುಳ್ಳ ಮಕ್ಕಳಿಗೆ ವೈದ್ಯಕೀಯ ತಪಾಸಣೆ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದಲ್ಲಿ ದೈಹಿಕ ನ್ಯೂನತೆ ಹೊಂದಿರುವ ಮಕ್ಕಳಿಗೆ ಆರೋಗ್ಯ ಇಲಾಖೆಯ ತಜ್ಞ ವೈದ್ಯರಿಂದ ತಪಾಸಣೆ ನಡೆಸಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.ಡಾ ಕೀರ್ತಿ ನೇತ್ರ ತಜ್ಞರು,ಡಾ ಮನ್ಸೂರ್ ಅಹಮದ್ ಇ ಎನ್ ಟಿಡಾ ಅಚ್ಯುತ ನಾಯಕ ಕೀಲು ಮತ್ತು ಮೂಳೆ ತಜ್ಞರು ಡಾ ಬಿ ಎಸ್ ವೇದಮೂರ್ತಿ ವಿಶೇಷ ಅಗ್ಯತತೆಯುಳ್ಳ ಮಕ್ಕಳ ತಪಾಸಣೆ ನಡೆಸಿದರು.ತಾಲೂಕಿನ ವಿವಿಧ ಶಾಲೆಗಳ 160 ಕ್ಕೂ ಹೆಚ್ಚು ವಿಶೇಷ ಅಗತ್ಯತೆಯುಳ್ಳ ಮಕ್ಕಳು ವೈದ್ಯಕೀಯ ಶಿಬಿರದ ಪ್ರಯೋಜನ ಪಡೆದುಕೊಂಡರು.ಬಿ ಆರ್ ಪಿ ಬಸವರಾಜ ಸಚಿನ್ ಆರಾಧ್ಯ, ಹೊನ್ನಪ್ಪ ಸಮೀರ್ ಇತರರು ಇದ್ದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 