ಸಾವಳಗಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಜೂನ್ 14ರಂದು ಸನ್ಮಾನ
Talented students in Savalagi to be felicitated on June 14
ಜಮಖಂಡಿ 13: ತಾಲೂಕಿನ ಸಾವಳಗಿ ಗ್ರಾಮದ ಸು-ಸಂಸ್ಕಾರ ಸೇವಾ ಮಂಚದ ಸಹಯೋಗದಲ್ಲಿ 2025-26ನೇ ಸಾಲಿನ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ದ್ವಿತೀಯ ವರ್ಷದ ಪರೀಕ್ಷೆಗಳಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಜೂನ್ 14ರಂದು ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮವು ಬೆಳಿಗ್ಗೆ 9 ಗಂಟೆಗೆ ತಕ್ಕೋಡ ಕ್ರಾಸ್ ಬಳಿಯ ಸಿದ್ದನಗೌಡ ಪಾಟೀಲ ಫಾರ್ಮ್ ಹೌಸ್ನಲ್ಲಿ ನಡೆಯಲಿದೆ ಎಂದು ಮಂಚದ ಅಧ್ಯಕ್ಷ ಪಂಡಿತ ಪಾಶ್ವನಾಥ ಉಪಾಧ್ಯೆ ತಿಳಿಸಿದ್ದಾರೆ.
ಕಾರ್ಯಕ್ರಮದಲ್ಲಿ ಓಲೇಮಠದ ಆನಂದ ದೇವರು ಸಾನ್ನಿಧ್ಯ ವಹಿಸಲಿದ್ದು, ಮಾಜಿ ಶಾಸಕ ಆನಂದ ನ್ಯಾಮಗೌಡ, ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಮಾಜಿ ಜಿಪಂ ಉಪಾಧ್ಯಕ್ಷ ಸುಶೀಲಕುಮಾರ ಬೆಳಗಲಿ, ಉಮೇಶ ಮಹಾಬಳಶೆಟ್ಟಿ, ಗುರುಲಿಂಗ ಅಂಗಡಿ, ಬಸವರಾಜ ಸಿಂಧೂರ, ವರ್ಧಮಾನ ನ್ಯಾಮಗೌಡ, ರಾಹುಲ್ ಕಲ್ಲೂತಿ, ಸಮೀರ್ ಕಂಗೊಳ್ಳಿ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು 