ಕದನವಿರಾಮ ಬೆನ್ನಲ್ಲೇ ತಾಲಿಬಾನ್ ಉಗ್ರರಿಂದ 100 ಮಂದಿ ಒತ್ತೆಯಾಳು
ಕಾಬೂಲ್: ಹೆಂಗಸರು, ಮಕ್ಕಳು ಸೇರಿದಂತೆ ಸುಮಾರು ನೂರು ಮಂದಿಯನ್ನು ತಾಲಿಬಾನ್ ಭಯೋತ್ಪಾದಕರು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿರುವ ಘಟನೆ ಅಫ್ಘಾನಿಸ್ತಾನದಲ್ಲಿ ಸೋಮವಾರ ನಡೆದಿದೆ.
ಈದ್ ಅಲ್ ಅಧಾ ರಜೆಯ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನ್ ಅಧ್ಯಕ್ಷ ಅಶ್ರಫ್ ಗನಿ ತಾಲಿಬಾನ್ ಉಗ್ರರ ವಿರುದ್ಧ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ ತಾಲಿಬಾನ್ ಉಗ್ರರು ಇದೀಗ ನೂರು ಮಂದಿಯನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿರುವ ಘಟನೆ ನಡೆದಿದೆ.
ಕದನ ವಿರಾಮವನ್ನು ಮುಖಂಡರು ಒಪ್ಪಿಕೊಂಡಿರುವುದಾಗಿ ತಾಲಿಬಾನ್ ಮೂಲಗಳು ತಿಳಿಸಿರುವುದಾಗಿ ರಾಯಟಸರ್್ ವರದಿ ಹೇಳಿದ್ದು, ಏತನ್ಮಧ್ಯೆ ಈ ಬಗ್ಗೆ ತಾಲಿಬಾನ್ ಮುಖ್ಯ ನಾಯಕ, ಉಗ್ರ ಶೇಕ್ ಹೈಬತುಲ್ಲಾನ ಅನುಮತಿಗಾಗಿ ಕಾಯಲಾಗುತ್ತಿದೆ ಎಂದು ವರದಿ ವಿವರಿಸಿದೆ.
ಷರತ್ತುಸಹಿತ ಕದನ ವಿರಾಮ ಇಂದಿನಿಂದ ಆರಂಭವಾಗಲಿದ್ದು, ಎಲ್ಲಿಯವರೆಗೆ ತಾಲಿಬಾನ್ ಇದನ್ನು ಗೌರವಿಸಿ ರಕ್ಷಿಸಿಕೊಳ್ಳುತ್ತದೆಯೋ ಅಲ್ಲಿಯವರೆಗೆ ಮುಂದುವರಿಯಲಿದೆ ಎಂದು ಗನಿ
ತಿಳಿಸಿದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 