ತಾಳಿಕೋಟಿ ಸಹಕಾರಿ ಬ್ಯಾಂಕ್ ನೂತನ ನಿರ್ದೇಶಕರಿಗೆ ಸನ್ಮಾನ
Talikoti Cooperative Bank felicitates the new director
ತಾಳಿಕೋಟಿ ಸಹಕಾರಿ ಬ್ಯಾಂಕ್ ನೂತನ ನಿರ್ದೇಶಕರಿಗೆ ಸನ್ಮಾನ
ತಾಳಿಕೋಟಿ 30 : ಪಟ್ಟಣದ ಪ್ರತಿಷ್ಠಿತ ತಾಳಿಕೋಟಿ ಸಹಕಾರಿ ಬ್ಯಾಂಕಿನ ಆಡಳಿತ ಮಂಡಳಿಯ 13 ಜನ ನೂತನ ನಿರ್ದೇಶಕರಿಗೆ ಪಟ್ಟಣದ ಸಜ್ಜನ ಗಾಣಿಗ ಸೇವಾ ಸಂಘದ ವತಿಯಿಂದ ಗುರುವಾರ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಮುರಿಗೆಪ್ಪ ಸರಶೆಟ್ಟಿ ಮಾತನಾಡಿ ನೀವು ಚುನಾವಣೆ ಸಂದರ್ಭದಲ್ಲಿ ನಮಗೆ ಕೊಟ್ಟ ಮಾತಿನಂತೆ ಮತನೀಡಿ ಆಶೀರ್ವಾದ ಮಾಡಿದ್ದೀರಿ ಈ ನಿಮ್ಮ ಸಹಕಾರಕ್ಕೆ ಋಣಿಯಾಗಿದ್ದೇವೆ, ನಿಮ್ಮ ವಿಶ್ವಾಸಕ್ಕೆ ಚುತಿ ಬಾರದ ಹಾಗೆ ಬ್ಯಾಂಕಿನ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇವೆ ನಮಗೆ ಸಮಾಜದ ವತಿಯಿಂದ ಗೌರವಿಸಿದ್ದಕ್ಕೆ ಕೃತಜ್ಞರಾಗಿದ್ದೇವೆ ಎಂದರು. ಸಜ್ಜನ ಸಮಾಜದ ಮುಖಂಡ ನೂತನ ನಿರ್ದೇಶಕ ಕಾಶಿನಾಥ ಸಜ್ಜನ ಮಾತನಾಡಿ ತೀವ್ರ ಪೈಪೋಟಿ ಏರ್ಪಟಟಿದ್ದ ಈ ಚುನಾವಣೆಯಲ್ಲಿ ಸಮಾಜದ ಬಾಂಧವರು ನನ್ನ ಗೆಲುವಿಗಾಗಿ ಮಾತ್ರ ಅಲ್ಲ ಇಡೀ ನಮ್ಮ ಪೆನಲ್ ಸದಸ್ಯರ ಗೆಲುವಿಗಾಗಿ ಶಕ್ತಿ ಮೀರಿ ಕೆಲಸ ಮಾಡಿದ್ದೀರಿ ಈ ನಿಮ್ಮ ಋಣವನ್ನು ತೀರಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆ ಎಂದರು. ಬ್ಯಾಂಕಿನ ನೂತನ ನಿರ್ದೇಶಕರಾದ ದತ್ತಾತ್ರೇಯ ಹೆಬಸೂರ, ಈಶ್ವರ್ಪ ಬಿಳೇಭಾವಿ, ಚಿಂತಪ್ಪಗೌಡ ಯಾಳಗಿ, ಬಾಬು ಹಜೇರಿ,ಪ್ರಹ್ಲಾದ್ ಸಿಂಗ್ ಹಜೇರಿ, ಸುರೇಶ ಪಾಟೀಲ ಡಿ.ಕೆ. ಪಾಟೀಲ, ಸಂಜೀವಪ್ಪ ಬರದೇನಾಳ, ರಾಮಪ್ಪ ಕಟ್ಟಿಮನಿ, ಗಿರಿಜಾಬಾಯಿ ಕೊಡಗಾನೂರ, ಶೈಲಾ ವಿಶ್ವನಾಥ ಬಡದಾಳಿ, ಸಜ್ಜನ ಸಮಾಜದ ಅಧ್ಯಕ್ಷ ಪ್ರಕಾಶ ಸಜ್ಜನ,ಉಪಾಧ್ಯಕ್ಷ ತಿಪ್ಪಣ್ಣ ಸಜ್ಜನ,ಗಣ್ಯರಾದ ಗುರುಲಿಂಗಪ್ಪ ಸಜ್ಜನ,ಪರ್ಪ ಸಜ್ಜನ, ರಾಜು ಸಜ್ಜನ,ರಾಘು ಹಜೇರಿ,ರಾಜು ಕೊಡಗಾನೂರ, ಮುತ್ತು ಕಶಟ್ಟಿ, ಜಗದೀಶ ಬಿಳೆಭಾವಿ, ಮಲ್ಲು ಪಾಲ್ಕಿ ಸಮಾಜದ ಹಿರಿಯರು ಹಾಗೂ ಮಹಿಳೆಯರು ಇದ್ದರು. ಶ್ರೀಮತಿ ಜಯಶ್ರೀ ಸಜ್ಜನ ಪ್ರಾರ್ಥಿಸಿದರು,ಶಿಕ್ಷಕ ಎಸ್.ಪಿ.ಸಜ್ಜನ ಸ್ವಾಗತಿಸಿದರು. ಶಿಕ್ಷಕ ಕಾಶಿನಾಥ ಸಜ್ಜನ ನಿರೂಪಿಸಿ ವಂದಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 