ತಾಲೂಕು ಆಡಳಿತದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ತಾಲೂಕು ಆಡಳಿತದಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ Taluk administration celebrates Nadaprabhu Kempegowda Jayanti

ಲೋಕದರ್ಶನ ವರದಿ 

ಹುಬ್ಬಳ್ಳಿ   01: ಇತ್ತೀಚಿಗೆ ತಾಲೂಕು ಆಡಳಿತ ಸೌಧದ ತಹಶೀಲ್ದಾರ ಕಾರ್ಯಾಲಯದಲ್ಲಿ ಹುಬ್ಬಳ್ಳಿ ತಾಲೂಕು ಆಡಳಿತದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತೋತ್ಸವವನ್ನು ನಾಡಪ್ರಭು ಕೆಂಪೇಗೌಡ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹುಬ್ಬಳ್ಳಿ ಶಹರ ಗ್ರೇಡ್ -2 ತಹಸೀಲ್ದಾರ್ ಸಿ. ಎಸ್‌. ಕುಲಕರ್ಣಿ, ವಹಿಸಿದ್ದರು. ಈ ಸಂದರ್ಭದಲ್ಲಿ ಸಮಾಜದ ಮುಖಂಡರಾದ ಮಂಜುನಾಥ್ ಲೂತಿಮಠ, ಸಂಜೀವ್ ದುಮ್ಮಕನಾಳ, ವಿಶ್ವನಾಥ್ ಪೂಜಾರ್, ಈರ​‍್ಪ ಎಮ್ಮಿ, ರಮೇಶ್ ಹಳ್ಳಿಕೇರಿ, ಕಂದಾಯ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಸಾರ್ವಜನಿಕರು ಇತರರು ಭಾಗವಹಿಸಿದ್ದರು.