ತಾಲೂಕು ಆಡಳಿತದಿಂದ ಯೋಗಿ ನಾರೇಯಣ ಯತೀಂದ್ರರ ಜಯಂತಿ
Taluk administration celebrates Yogi Narayan Yathindra's birth anniversary
ಹುಬ್ಬಳ್ಳಿ ಮಾ.3: ಇಂದು ತಾಲೂಕು ಆಡಳಿತಸೌಧದ ತಹಶೀಲ್ದಾರ ಕಾರ್ಯಾಲಯದ ಸಭಾಭವನದಲ್ಲಿ ಕಂದಾಯ ಇಲಾಖೆ ಮತ್ತು ತಾಲೂಕು ಆಡಳಿತದಿಂದ ಯೋಗಿ ನಾರೇಯಣ ಯತೀಂದ್ರರ ( ಕೈವಾರ ತಾತಯ್ಯ) ಜಯಂತೋತ್ಸವವನ್ನು ಆಚರಣೆ ಮಾಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಹುಬ್ಬಳ್ಳಿ ಶಹರ ತಹಶೀಲ್ದಾರರಾದ ಮಹೇಶ ಭಗವಂತ ಗಸ್ತೆ ಅವರು ಯೋಗಿ ನಾರೇಯಣ ಯತೀಂದ್ರರ ( ಕೈವಾರ ತಾತಯ್ಯ)ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭದಲ್ಲಿ ಸಮಾಜದ ಮುಖಂಡರಿಗೆ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಹುಬ್ಬಳ್ಳಿಯ ರುದ್ರಾಕ್ಷಿಮಠದ ಬಸವಲಿಂಗ ಸ್ವಾಮೀಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರೇಡ್ 2 ತಹಶೀಲ್ದಾರ ಸಿ.ಎಸ್.ಕುಲಕರ್ಣಿ, ಸಮಾಜದ ಮುಖಂಡರಾದ ವೆಂಕಟೇಶ ಮುತ್ತಗಾರ, ಶಶಿಕಾಂತ ಬೀಜವಾಡ, ಅಟಲ್ ಭಾಷಾ ಮುದ್ದಿನಮನಿ, ಎನ್.ಎನ್. ಕರನೆದ್ದಿ, ಚನ್ನಪ್ಪ ತರ್ಲಘಟ್ಟ, ಸಾಯಿನಾಥ್ ರಾಚೋಟಿ, ನಿಂಗಪ್ಪ ಬಡಿಗೇರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 