ರಾಯಬಾಗ: ತಾಲೂಕಾ ಮಟ್ಟದ ಜಾಗೃತಿ- ಶಿಕ್ಷಣ ಕಾರ್ಯಕ್ರಮ
ಲೋಕದರ್ಶನ ವರದಿ
ರಾಯಬಾಗ 27: ಪಟ್ಟಣದ ಮಹಾವೀರ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆ ಸಭಾಭವನದಲ್ಲಿ ದಿ.22ರಂದು ಡಾ.ಬಿ.ಆರ್.ಅಂಬೇಡ್ಕರ ಸಾಂಸ್ಕೃತಿಕ ಕಲಾ ಸಂಘ, ಅಲಖನೂರ, ನೆಹರು ಯುವ ಕೇಂದ್ರ ಬೆಳಗಾವಿ ಹಾಗೂ ಲಕ್ಷ್ಮೀಸೇನ ಸಂಸ್ಥೆಯ ಮಹಾವೀರ ಖಾಸಗಿ ಕೈಗಾರಕಾ ತರಬೇತಿ ಸಂಸ್ಥೆ ರಾಯಬಾಗ ಇವುಗಳ ಸಂಯುಕ್ತ ಆಶ್ರಯದಲ್ಲಿ ತಾಲೂಕಾ ಮಟ್ಟದ ಜಾಗೃತಿ ಮತ್ತು ಶಿಕ್ಷಣ ಕಾರ್ಯಕ್ರಮ ಜರುಗಿತು.
ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಸಮಾಲೋಚಕ ವೈ.ಆರ್.ಕಾಂಬಳೆ ಅವರು, ಬ್ಯಾಂಕಿನ ಸೌಲಭ್ಯ ಹಾಗೂ ಯೋಜನೆಗಳ ಕುರಿತು ವಿವರಿಸಿದರು. ಲಕ್ಷ್ಮೀಸೇನ ಸಂಸ್ಥೆಯ ಅಧ್ಯಕ್ಷ ಡಿ.ಎಮ್.ಶೆಟ್ಟಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು.
ಬೆಳಗಾವಿ ನೆಹರು ಯುವ ಕೇಂದ್ರದ ಲೆಕ್ಕಾಧಿಕಾರಿ ಆರ್.ಆರ್.ಮುತಾಲಿಕ ದೇಸಾಯಿ, ಮಹಾವೀರ ಖಾಸಗಿ ಕೈಗಾರಿಕಾ ತರಬೇತಿ ಕೇಂದ್ರದ ಪ್ರಾಚಾರ್ಯ ಟಿ.ವ್ಹಿ.ಕೇಶನೂರ, ಡಾ.ಎಸ್.ಎಸ್.ಪಾಟೀಲ, ಎಮ್.ಎಲ್.ಶಿಂಗೆ, ವಿಠ್ಠಲ ಜೋಡಟ್ಟಿ ಸೇರಿದಂತೆ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.
ಸರಸ್ವತಿ ದೇವರುಸಿ ಸ್ವಾಗತಿಸಿದರು, ಯಲ್ಲಪ್ಪ ಮಾದರ ನಿರೂಪಿಸಿ, ವಂದಿಸಿದರು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 