ಬರ ಪರಿಹಾರಕ್ಕೆ ತಾಳೂರು ರಾಘವೇಂದ್ರ ರೆಡ್ಡಿ ಒತ್ತಾಯ
Taluru Raghavendra Reddy urges for drought relief
ಬಳ್ಳಾರಿ, ಸೆ.19 (ಸಿರುಗುಪ್ಪ): ರಾಜ್ಯ ಸರ್ಕಾರವು ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ, ರೈತರಿಗೆ ಕೂಡಲೇ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಸಮಾಜಸೇವಕ ತಾಳೂರು ರಾಘವೇಂದ್ರ ರೆಡ್ಡಿ ಒತ್ತಾಯಿಸಿದರು.
ಸಿರುಗುಪ್ಪ ತಾಲೂಕಿನಲ್ಲಿ ಕಳೆದ ಮುಂಗಾರು ಹಂಗಾಮಿನಲ್ಲಿ ಕೆಲ ರೈತರು ಹತ್ತಿ ಸೇರಿದಂತೆ ವಿವಿಧ ಬೆಳೆಗಳನ್ನು ಬಿತ್ತನೆ ಮಾಡಿದ್ದರು. ಆದರೆ, ಸಮಯಕ್ಕೆ ಸರಿಯಾಗಿ ಮಳೆಯಾಗದ ಕಾರಣ ಬೆಳೆಗಳು ಹಾನಿಗೊಳಗಾಗಿ ರೈತರು ನಷ್ಟ ಅನುಭವಿಸಿದ್ದಾರೆ. ಸರ್ಕಾರ ತಕ್ಷಣವೇ ಬೆಳೆ ನಷ್ಟ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.
ಸಿರುಗುಪ್ಪ ತಾಲೂಕಿನ ಕರೂರು ಹೋಬಳಿಯ ಹೊಸಳ್ಳಿ ಗ್ರಾಮದಲ್ಲಿ ನಡೆದ ‘ಪ್ರಜಾ ಸೇವೆ’ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗೌಸಿಯಾ ಅವರಿಗೆ ಮನವಿ ಪತ್ರ ಸಲ್ಲಿಸಿದ ರಾಘವೇಂದ್ರ ರೆಡ್ಡಿ, ತಾಲೂಕಿನಲ್ಲಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಮತ್ತು ನೀರಿನ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದರು.
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 