ಆರೋಪಿಗಳ ಗುರುತು ಪತ್ತೆಗಾಗಿ ಮೈಸೂರಿಗೆ ಶಾಸಕ ತನ್ವೀರ್ ಸೇಠ್
ಮೈ ಸೂರು, ಜ 9 ಶಾಸಕ ತನ್ವೀರ್ ಸೇಠ್ ಇಂದು ಮೈಸೂರಿಗೆ ವಾಪಸ್ಸಾಗಲಿದ್ದಾರೆ.ತನ್ವೀರ್ ಅವರ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗುರುತು ಪತ್ತೆ ಹಚ್ಚಲು ಶಾಸಕರು ಮೈಸೂರಿಗೆ ತೆರಳಲಿದ್ದಾರೆ.ಆರೋಪಿ ಫರ್ಹಾನ್ ಪಾಷಾ ಗುರುತು ಹಿಡಿಯಲು ತನ್ವೀರ್ ಆಗಮಿಸಿದ್ದು, ಇಂದು ಮೈಸೂರು ಜೈಲಿನಲ್ಲಿ ಆರೋಪಿ ಗುರುತು ಪತ್ತೆ ಹಚ್ಚಲಿದ್ದಾರೆ.ಶಾಸಕರ ಜತೆಗೆ 6 ಮಂದಿ ಪ್ರತ್ಯಕ್ಷದರ್ಶಿಗಳು ಹಾಗೂ ಇಬ್ಬರು ಪೊಲೀಸರು ಹಾಜರಾಗುವ ಸಾಧ್ಯತೆ ಇದೆ ಎನ್ನಲಾಗಿದೆ.ಕಳೆದ ನವೆಂಬರ್ 18ರಂದು ನಡೆದ ಕಾರ್ಯಕ್ರಮವೊಂದರಲ್ಲಿ ಶಾಸಕ ತನ್ವೀರ್ ಸೇಠ್ ಮೇಲೆ ಕೊಲೆ ಯತ್ನ ನಡೆದಿತ್ತು. ಫರ್ಹಾನ್ ಪಾಷಾ ಚಾಕುವಿನಿಂದ ಕತ್ತಿನ ಭಾಗಕ್ಕೆ ಇರಿದಿದ್ದನು. ಈ ವೇಳೆ ಕುತ್ತಿಗೆ ಭಾಗಕ್ಕೆ ಪೆಟ್ಟು ಬಿದ್ದಿದ್ದು, ತಕ್ಷಣವೇ ಶಾಸಕರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ನಂತರ ವೈದ್ಯರ ಸಲಹೆ ಮೇರೆಗೆ ವಿದೇಶದಲ್ಲಿ ಚಿಕಿತ್ಸೆ ಮುಂದುವರೆಸಿದ್ದರು. ಚಿಕಿತ್ಸೆ ಮುಕ್ತಾಯಗೊಂಡ ನಂತರ ದುಬೈನಲ್ಲೇ ಶಾಸಕರು ವಿಶ್ರಾಂತಿ ಪಡೆಯುತ್ತಿದ್ದರು. ಇದೀಗ ವಿಶ್ರಾಂತಿ ಮುಗಿಸಿ ಅವರು ವಿದೇಶದಿಂದ ಭಾರತಕ್ಕೆ ಮರಳಿದ್ದಾರೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 