ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಮುಂದೂಡಿಕೆ
ಬೆಂಗಳೂರು, ಮಾರ್ಚ್ 26, ಕೊರೊನಾ ವೈರಾಣು ಸೋಂಕು ಹರಡದಂತೆ ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಇಡೀ ದೇಶ ಸ್ತಬ್ಧವಾಗಿರುವ ಕಾರಣ 2020 ರ ಏಪ್ರಿಲ್ 11 ರಂದುನಿಗದಿಯಾಗಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ ಟಿಇಟಿ ಮುಂದೂಡಲಾಗಿದೆ. ಕೊವಿಡ್ 19 ನಿಯಂತ್ರಣ ಸಂಬಂಧ 21 ದಿನಗಳ ಕಾಲ ಇಡೀ ದೇಶದ ಲಾಕ್ ಡೌನ್ ಗೆ ಕೇಂದ್ರ ಸರ್ಕಾರ ಆದೇಶಿಸಿದೆ. ಆದ ಕಾರಣ ಟಿಇಟಿ ಮುಂದೂಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಟಣೆ ತಿಳಿಸಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ಘೋಷಿಸಲಾಗುವುದು ಎಂದೂ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 