ಪ್ರಾರ್ಥನಾ ಸಮಯದಲ್ಲಿ ಹೃದಯಾಘಾತ: ಶಿಕ್ಷಕ ಸಾವು
Teacher dies of heart attack during prayer
ಜಮಖಂಡಿ 27: ನಗರದ ತುಂಗಳ ಆಂಗ್ಲ ಮಾಧ್ಯಮ ಶಾಲೆಯ ಕನ್ನಡ ಭಾಷಾ ಶಿಕ್ಷಕ ಎಂದಿನಂತೆ ಶಾಲಾ ಕರ್ತವ್ಯಕ್ಕೆ ಹಾಜರಾಗಿದ್ದರು. ಬೆಳಿಗ್ಗೆಯ ಪ್ರಾರ್ಥನಾ ಸಮಯದಲ್ಲಿ ಗುರುಪಾದ ಕಾಶಿರಾಯ ಹಿಪ್ಪರಗಿ ಶಿಕ್ಷಕ ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ನಡೆದಿದೆ.
ತಾಲೂಕಿನ ನಾವಲಗಿ ಗ್ರಾಮದ ಗುರುಪಾದ ಕಾಶಿರಾಯ ಹಿಪ್ಪರಗಿ (48) ಎಂಬ ಕನ್ನಡ ಭಾಷಾ ಶಿಕ್ಷಕ ನಾವಲಗಿಯಲ್ಲಿ ಹಲವಾರು ವರ್ಷ ಮತ್ತು ಕಳೆದ 13 ವರ್ಷದಿಂದ ತುಂಗಳ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸಿ ಹಲವಾರು ವಿದ್ಯಾರ್ಥಿಗಳಿಗೆ ದಾರೀದೀಪವಾಗಿದ್ದಾರೆ. ಇವರು ಶಾಲಾ ಸಮಯದ ಮುಂಜಾನೆ ಪ್ರಾರ್ಥನಾ ಸಮಯದಲ್ಲಿ ಏಕಾಏಕಿ ಹೃದಯಾಘಾತ ಸಂಬವಿಸಿದೆ. ಶೀಘ್ರವೇ ಚಿಕಿತ್ಸೆಗೆ ಕರೆದೊಯ್ದರು ಚಿಕಿತ್ಸೆ ಫಲಕಾರಿಯಾಗದೆ 10 ಗಂಟೆಗೆ ನಿಧನರಾಗಿದ್ದರೆ.
ಗ್ರಾಮದಲ್ಲಿ ಶಿಕ್ಷಕನ ಅಗಲಿಕೆಗೆ ಜಮಖಂಡಿ ಮತ್ತು ನಾವಲಗಿ ಸುತ್ತಮುತ್ತಲಿನ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಶೋಕ ಸಾಗರದಲ್ಲಿ ಮುಳುಗಿದರು. ತುಂಗಳ ಶಾಲೆಯ ಎಲ್ಲ ವಿದ್ಯಾರ್ಥಿಗಳು ಶಿಕ್ಷಕನ ಅಗಲಿಕೆಗೆ ಕಣ್ಣಿರು ಸುರಿಸುತ್ತಿರುವುದು ದೃಶ್ಯ ಕಂಡುಬಂದಿತು.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 