ದೂಪದಾಳದಲ್ಲಿ ಶಿಕ್ಷಕರ ದಿನಾಚರಣೆ

ದೂಪದಾಳದಲ್ಲಿ ಶಿಕ್ಷಕರ ದಿನಾಚರಣೆ  Teachers' Day Celebration at Doopadaala


ದೂಪದಾಳ 05: ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಕರ್ನಾಟಕ ರಕ್ಷಣಾ ವೇದಿಕೆ ರೈತ ಘಟಕದ ಅಧ್ಯಕ್ಷ ರೆಹಮಾನ್ ಮೊಕಾಶಿ ಮಾತನಾಡಿ, ಸರ್ಕಾರಿ ಶಾಲೆಗಳ ಉಳಿವಿನಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದರು. ಕಾರ್ಯಕ್ರಮದಲ್ಲಿ ಎಸ್ಡಿಎಂಸಿ ಉಪಾಧ್ಯಕ್ಷರು, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಶಾಲಾ ಮಕ್ಕಳು ಉಪಸ್ಥಿತರಿದ್ದರು.