ಶ್ರೀನಗರದಲ್ಲಿ ವಿದೇಶಿ ಪ್ರತಿನಿಧಿಗಳ ತಂಡ
ಜಮ್ಮು, ಫೆ 13 : ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಿದ್ದ ಸಂವಿಧಾನ ವಿಧಿ 370 ರದ್ದುಪಡಿಸಿದ ನಂತರ ಅಲ್ಲಿನ ವಸ್ತುಸ್ಥಿತಿ ತಿಳಿಯಲು ಐರೋಪ್ಯ ಒಕ್ಕೂಟ ಹಾಗೂ ಕೊಲ್ಲಿ ರಾಷ್ಟ್ರಗಳ ವಿಶೇಷ ಪ್ರತಿನಿಧಿಗಳ ತಂಡ ಬುಧವಾರ ಶ್ರೀನಗರಕ್ಕೆ ಭೇಟಿ ನೀಡಿತು.
ಜರ್ಮನಿ, ಕೆನಡಾ, ಫ್ರಾನ್ಸ್, ನ್ಯೂಜಿಲೆಂಡ್ , ಮೆಕ್ಸಿಕೋ, ಇಟಲಿ, ಅಫ್ಘಾನಿಸ್ತಾನ, ಆಸ್ಟ್ರೇಲಿಯಾ, ಉಜ್ಬೇಕಿಸ್ತಾನ, ಪೋಲೆಂಡ್ ಹಾಗೂ ಐರೋಪ್ಯ ಒಕ್ಕೂಟದ ರಾಯಭಾರಿಗಳು ನಿಯೋಗದಲ್ಲಿದ್ದಾರೆ.
ಶ್ರೀನಗರದಲ್ಲಿರುವ ಕೈಗಾರಿಕೋದ್ಯಮಿಗಳು ಹಾಗೂ ವರ್ತಕರ ಪ್ರತಿನಿಧಿಗಳನ್ನೊಳಗೊಂಡ ಗುಂಪುಗಳೊಂದಿಗೆ ನಿಯೋಗ ಸಂವಾದ ನಡೆಸಿದೆ.
ಬುಧವಾರವೇ ಉತ್ತರ ಕಾಶ್ಮೀರದ ಬಾರಾಮುಲ್ಲಾ ನಗರಕ್ಕೆ ನಿಯೋಗ ಭೇಟಿ ನೀಡುವ ಉದ್ದೇಶ ಹೊಂದಿತ್ತಾದರೂ ಪ್ರತಿಕೂಲ ಹವಾಮಾನದಿಂದ ಈ ಕಾರ್ಯಕ್ರಮ ರದ್ದಾಗಿದೆ. ನಿಯೋಗ
ಗುರುವಾರ ಜಮ್ಮುವಿಗೆ ಭೇಟಿ ನೀಡಿ ಲೆಫ್ಟಿನೆಂಟ್ ಗವರ್ನರ್ ಗಿರೀಶ್ಚಂದ್ರ ಮುರ್ಮು ಹಾಗೂ ಉನ್ನತಾಧಿಕಾರಿಗಳನ್ನು ಭೇಟಿ ಮಾಡಲಿದೆ. ಈ ಹಿಂದೆ ಜಮ್ಮುವಿನಲ್ಲಿ ಪರಿಸ್ಥಿತಿ ಪರಾಮರ್ಶೆಗೆ ಭಾರತದ ಅಮೆರಿಕ ರಾಯಭಾರಿ ಕೆನ್ನೆತ್ ಜಸ್ಟರ್ ಸೇರಿದಂತೆ 15 ರಾಯಭಾರಿಗಳ ತಂಡ ಜನವರಿ ತಿಂಗಳಲ್ಲಿ ಜಮ್ಮು ಮತ್ತು ಕಾಶ್ಮೀರಕ್ಕೆ ಎರಡು ದಿನ ಭೇಟಿ ನೀಡಿತ್ತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 