ತಾಂತ್ರಿಕ ದೋಷ: ರಜನಿಕಾಂತ್ ಪ್ರಯಾಣಿಸುತ್ತಿದ್ದ ವಿಮಾನ ವಿಳಂಬ
ಚೆನ್ನೈ / ಮೈಸೂರು, ಜ 27 ಸೂಪರ್ ಸ್ಟಾರ್ ರಜನಿಕಾಂತ್ ಸೇರಿದಂತೆ 42 ಪ್ರಯಾಣಿಕರನ್ನು ಹೊತ್ತ ಮೈಸೂರಿಗೆ ಹೊರಟಿದ್ದ ಖಾಸಗಿ ವಿಮಾನದಲ್ಲಿ ಸೋಮವಾರ ಬೆಳಿಗ್ಗೆ ತಾಂತ್ರಿಕ ದೋಷ ಉಂಟಾಗಿತ್ತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.‘ವಿಮಾನವು ಟೇಕ್-ಆಫ್ ಆಗುವ ಸ್ವಲ್ಪ ಸಮಯದ ಮುನ್ನವೇ ದೋಷ ಪತ್ತೆಯಾಗಿದೆ. ತಕ್ಷಣವೇ ಎಂಜಿನಿಯರ್ ಗಳನ್ನು ಕರೆಸಲಾಗಿದ್ದು, ದೋಷವನ್ನು ಅವರು ಸರಿಪಡಿಸಿದ್ದಾರೆ.’ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಾಂತ್ರಿಕ ದೋಷದಿಂದ ವಿಮಾನ ನಿರ್ದಿಷ್ಟ ಸ್ಥಳ ತಲುಪಲು ಸುಮಾರು ಎರಡು ತಾಸು ವಿಳಂಬವಾಗಿತ್ತು. ಎರಡು ತಾಸಿನ ನಂತರ ವಿಮಾನ ಮೈಸೂರಿನತ್ತ ಹೊರಟಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ‘ಈ ಮಧ್ಯೆ ರಜನಿಕಾಂತ್ ಅವರು ವಿಮಾನದಲ್ಲಿದ್ದ ಕೆಲ ಪ್ರಯಾಣಿಕರೊಂದಿಗೆ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಪ್ರಯಾಣಿಕರೊಂದಿಗೆ ಚಿತ್ರಗಳನ್ನು ತೆಗೆಸಿಕೊಂಡಿದ್ದಾರೆ.’ ಎಂದು ಅಧಿಕಾರಿಗಳು ಹೇಳಿದ್ದಾರೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 