ಯಡಿಯೂರಪ್ಪ ಸಂಪುಟಕ್ಕೆ ಹತ್ತು ಮಂದಿ ನೂತನ ಸಚಿವ ಸೇರ್ಪಡೆ : ಸಚಿವ ಸಂಪುಟ ಸಂಖ್ಯಾಬಲ 28 ಕ್ಕೆ ಏರಿಕೆ
ಬೆಂಗಳೂರು,ಫೆ6, ಕಳೆದ ಡಿಸೆಂಬರ್ 5 ರಂದು ನಡೆದ ರಾಜ್ಯ ವಿಧಾನ ಸಭೆಯ ಉಪ ಚುನಾವಣೆಯಲ್ಲಿ ಬಿಜಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಹತ್ತು ಮಂದಿ ಶಾಸಕರು ಎರಡು ತಿಂಗಳ ಬಳಿಕ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರದ ಸಂಪುಟ ಸಚಿವರಾಗಿ ಸೇರ್ಪಡೆಯಾದರು. ರಾಜ್ಯ ಸಚಿವ ಸಂಪುಟ ಎರಡನೇ ಬಾರಿಗೆ ವಿಸ್ತರಣೆಯಾಗಿದ್ದು ಇದರಿಂದ ಸಂಪುಟದ ಸಂಖ್ಯಾಬಲ 28 ಕ್ಕೆ ಏರಿದೆ.ಸಚಿವ ಸಂಪುಟದಲ್ಲಿ ಇನ್ನೂ ಆರು ಸ್ಥಾನಗಳು ಖಾಲಿ ಇದ್ದು ಉಪ ಚುನಾವಣೆಯಲ್ಲಿ ಸೋತ ಹಾಗು ಅನರ್ಹ ಶಾಸಕರಿಗೆ ಮೀಸಲಿಡಲಾಗಿದೆ ಎನ್ನಲಾಗಿದೆ.
ಇಂದು ಯಶವಂತಪುರ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್,ಗೋಕಾಕ್ ಕ್ಷೇತ್ರದ ಶಾಸಕ ರಮೇಶ್ ಲಕ್ಷ್ಮಣ ರಾವ್ ಜಾರಕೀಹೊಳಿ, ವಿಜಯನಗರ ಕ್ಷೇತ್ರದ ಆನಂದ್ ಸಿಂಗ್, ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಡಾ ಕೆ ಸುಧಾಕರ್,ಕೃಷ್ಣರಾಜಪುರ ಕ್ಷೇತ್ರದ ಶಾಸಕ ಬಿ ಎ ಬಸವರಾಜ್, ಯಲ್ಲಾಪುರ ಕ್ಷೇತ್ರದ ಶಾಸಕ ಅರೆಬೈಲ್ ಶಿವರಾಮ್ ಹೆಬ್ಬಾರ್, ಹಿರೇಕೆರೂರು ಕ್ಷೇತ್ರದ ಬಸವನಗೌಡ ಚನ್ನಬಸವನಗೌಡ ಪಾಟೀಲ್,ಮಹಾಲಕ್ಷೀಪುರ ಕ್ಷೇತ್ರದ ಶಾಸಕ ಕೆ ಗೋಪಾಲಯ್ಯ, ಕೃಷ್ಣರಾಜಪೇಟೆ ಕ್ಷೇತ್ರದ ಶಾಸಕ ಎಂ.ಸಿ ನಾರಾಯಣಗೌಡ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ಶ್ರೀಮಂತ ಬಾಳಾ ಸಾಹೇಬ್ ಪಾಟೀಲ್ ಅವರು ರಾಜಭವನದ ಗಾಜಿನ ಮನೆಯಲ್ಲಿ ನಡೆದ ವಿಶೇಷ ಹಾಗೂ ಕಿಕ್ಕಿರಿದು ತುಂಬಿದ ಸಮಾರಂಭದಲ್ಲಿ ನೆರೆದ ಜನಸ್ತೋಮದ ಹರ್ಷೋದ್ಗಾರಗಳ ನಡುವೆ ಸಂಪುಟ ದರ್ಜೆ ಸಚಿವರಾಗಿ ಇಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಾಜ್ಯಪಾಲ ವಜುಭಾಯಿ ರುಢಾಭಾಯಿ ವಾಲಾ ಅವರು ಎಲ್ಲಾ ಹತ್ತು ಸಚಿವರಿಗೆ ಅಧಿಕಾರಪದ ಮತ್ತು ಗೋಪ್ಯತಾ ಪ್ರಮಾಣ ವಚನ ಬೋಧಿಸಿದರು.ಗುರುವಾರ ಬೆಳಿಗ್ಗೆ 10-30 ಗಂಟೆಗೆ ಪ್ರಾರಂಭವಾದ ಈ ಸಮಾರಂಭವು ಮೂವತ್ತು ನಿಮಿಷಗಳ ಕಾಲ ನಡೆಯಿತು. ಪ್ರಮಾಣ ವಚನ ಸ್ವೀಕರಿಸಿದೊಡನೆಯೇ, ಎಲ್ಲಾ ಹತ್ತೂ ಸಚಿವರಿಗೂ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಯವರು ಹೂಗುಚ್ಛ ನೀಡಿ ಅನಂದಿ ಸಿದರು.ಎಲ್ಲಾ ಸಚಿವರೂ ಕನ್ನಡ ಭಾಷೆಯಲ್ಲಿ ಹಾಗೂ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.ಶಿವರಾಮ್ ಹೆಬ್ಬಾರ್ ಅವರು ತಮ್ಮ ತಂದೆ-ತಾಯಿ ಹಾಗೂ ತಮ್ಮ ಕ್ಷೇತ್ರ ಜನತೆಯ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.ಬಳಿಕ ಬಿ ಸಿ ಪಾಟೀಲ್ ಅವರೂ ತಂದೆ-ತಾಯಿ, ಕ್ಷೇತ್ರ ಜನತೆಯ ಜೊತೆಗೆ ಜಗಜ್ಯೋತಿ ಬಸವೇಶ್ವರರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ರಮೇಶ್ ಜಾರಕಿಹೊಳಿ ಅವರು ಎಂದಿನಂತೆ ಸರಳ ಉಡುಪಿನಲ್ಲಿ ಆಗಮಿಸಿದ್ದರು. ಕೆ ಗೋಪಾಲಯ್ಯ ಅವರು ಸಾಂಪ್ರದಾಯಿಕ ರೇಷ್ಮೆ ವಸ್ತ್ರಧಾರಿಯಾಗಿ ಎಲ್ಲರ ಗಮನಸೆಳೆದರು.ಎಸ್ ಟಿ ಸೋಮಶೇಖರ್, ಡಾ ಕೆ ಸುಧಾಕರ್, ಬಿ ಎ ಬಸವರಾಜ್, ಶಿವರಾಮ ಹೆಬ್ಬಾರ್, ಬಿ ಸಿ ಪಾಟೀಲ್, ಕೆ ಗೋಪಾಲಯ್ಯ, ಎಂ ಸಿ ನಾರಾಯಣಗೌಡ ಹಾಗೂ ಶ್ರೀಮಂತ ಪಾಟೀಲ್ ಅವರು ಪ್ರಪ್ರಥಮ ಬಾರಿಗೆ ರಾಜ್ಯ ಸಚಿವ ಸಂಪುಟವನ್ನು ಪ್ರವೇಶಿಸಿದ್ದಾರೆ. ಆನಂದ್ ಸಿಂಗ್ ಮತ್ತು ರಮೇಶ್ ಜಾರಕಿಹೊಳಿ ಅವರು ಈ ಮುನ್ನ ಸಚಿವರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಬಿ ಎಸ್ ಯಡಿಯೂರಪ್ಪ ಸಚಿವ ಸಂಪುಟದ ಸದಸ್ಯರು, ಸಂಸದರು ಹಾಗೂ ಶಾಸಕರೂ ಸೇರಿದಂತೆ ಹಲವು ಗಣ್ಯರು, ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳು ಈ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 