ಜಾಗೃತಿ ವಿಡಿಯೊ ಬಳಿಕ ತೆಂಡೂಲ್ಕರ್ ದಾನ
ನವದೆಹಲಿ, ಮಾ 27 ಜಾಗತಿಕವಾಗಿ
ಭಯಭೀತಗೊಳಿಸಿರುವ ಕೊರೊನಾ ವೈರಸ್ ವಿರುದ್ಧ ಹೋರಾಟ ನಡೆಸುತ್ತಿರುವ ಭಾರತ ಸರಕಾರಕ್ಕೆ
ಹಲವು ಕ್ರೀಡಾಪಟುಗಳು ಈಗಾಗಲೇ ನೆರವಿನ ಹಸ್ತ ಚಾಚಿದ್ದಾರೆ. ಇದೀಗ ಮಾಸ್ಟರ್ ಬ್ಲಾಸ್ಟರ್
ಸಚಿನ್ ತೆಂಡೂಲ್ಕರ್ ಸಹ ಸರಕಾರಕ್ಕೆ 50 ಲಕ್ಷ ರೂ. ನೆರವು ಘೋಷಿಸಿದ್ದಾರೆ.ಇತ್ತೀಚೆಗಷ್ಟೇ
ತಮ್ಮ ಟ್ವೀಟರ್ ಖಾತೆಯಲ್ಲಿ ಕೊರೊನಾ ವೈರಸ್ ತಡೆಗಟ್ಟುವ ಕುರಿತಾದ ವಿಡಿಯೋ ಸಂದೇಶ
ಹಂಚಿಕೊಂಡಿದ್ದ ಸಚಿನ್, ಇದೀಗ ಜಾಗತಿಕ ಪಿಡುಗಾಗಿರುವ ಕೊರೊನಾ ವಿರುದ್ಧ ಹೋರಾಟಕ್ಕೆ 50
ಲಕ್ಷ ರೂಪಾಯಿ ನೀಡಲು ನಿರ್ಧರಿಸಿದ್ದಾರೆ ಎಂದು ವಿಶ್ವಾಸನೀಯ ಮೂಲಗಳು ತಿಳಿಸಿವೆ. ''ಜಾಗೃತಿ
ಮೂಡಿಸುವ ನಿಟ್ಟಿನಲ್ಲಿ ನಿಯಮಿತವಾಗಿ ವಿಡಿಯೊಗಳನ್ನು ಹಂಚಿಕೊಳ್ಳುತ್ತಿರುವ ಸಚಿನ್
ಪ್ರಧಾನ ಮಂತ್ರಿಗಳ ಪರಿಹಾರ ನಿಧಿ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 25
ಲಕ್ಷ ರೂ. ಕೊಡುಗೆ ನೀಡಲು ನಿರ್ಧರಿಸಿದ್ದಾರೆ. ಈ ಹಿಂದೆ ಅವರು, ಆಸ್ಟ್ರೇಲಿಯಾದಲ್ಲಿ
ಬುಷ್ಫೈರ್ನಂತಹ ದೇಣಿಗೆಗಳ ಭಾಗವಾಗಿದ್ದರು ಮತ್ತು ಈ ಪ್ರಯತ್ನದ ಸಮಯದಲ್ಲಿ
ಒಗ್ಗೂಡುವುದು ಮುಖ್ಯ ಎಂದು ನಂಬಿದ್ದಾರೆ,'' ಎಂದು ಮೂಲಗಳು ತಿಳಿಸಿವೆ.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 