ಕಾಶ್ಮೀರದ ವಿಶೇಷ ಅಧಿಕಾರ ರದ್ದು ಭಾರತದ ಆಂತರಿಕ ವಿಷಯ: ಹರಿಂದರ್ ಸಿಧು
ನವದೆಹಲಿ, ಆ. 31 ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಅಧಿಕಾರ ರದ್ದುಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರ ಭಾರತದ ಆಂತರಿಕ ವಿಷಯ ಎಂದು ನವದೆಹಲಿಯಲ್ಲಿನ ಆಸ್ಟ್ರೇಲಿಯಾ ಹೈಕಮಿಷನರ್ ಹರಿಂದರ್ ಸಿಧು ಹೇಳಿದ್ದಾರೆ.
ಕಾಶ್ಮೀರ ಸಮಸ್ಯೆಯನ್ನು ನವದೆಹಲಿ ಮತ್ತು ಇಸ್ಲಾಮಾಬಾದ್ ದ್ವಿಪಕ್ಷೀಯವಾಗಿ ಬಗೆಹರಿಸಬೇಕು ಎಂದು ಅವರು ಒತ್ತಿ ಹೇಳಿದರು.
ಇದು ತನ್ನ ಆಂತರಿಕ ವಿಷಯ ಎಂದು ಭಾರತ ಸರ್ಕಾರ ಹೇಳಿದೆ. ಅದನ್ನು ನಾವು ಸಮ್ಮತಿಸುತ್ತೇವೆ ಮತ್ತು ಗೌರವಿಸುತ್ತೇವೆ. ಈ ವಿಷಯವನ್ನು ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯವಾಗಿಯೇ ಪರಿಹರಿಸಿಕೊಳ್ಳಬೇಕು ಎಂಬುದು ಆಸ್ಟ್ರೇಲಿಯಾದ ನಿಲುವು ಕೂಡ ಆಗಿದೆ ಎಂದು ಅವರು ತಿಳಿಸಿದರು.
ಈ ಪ್ರದೇಶದಲ್ಲಿ ಶಾಂತಿ ನೆಲೆಸಿದರೆ ಆರ್ಥಿಕವಾಗಿಯೂ ಅಭಿವೃದ್ಧಿಯಾಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು.
ಎರಡೂ ದೇಶಗಳು ಸಂಯಮದಿಂದ ವರ್ತಿಸಿ ಜನರ ಸುರಕ್ಷತೆಗೆ ಹೆಚ್ಚಿನ ಗಮನ ಕೊಡಲಿದೆ ಎಂದು ನಾವು ಭಾವಿಸುವುದಾಗಿ ಅವರು ಹೇಳಿದರು.
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ 