ದೇಶದಲ್ಲಿ ಭಯೋತ್ಪಾದನೆ ಮೇಲುಗೈ ಸಾಧಿಸಲು ಬಿಡುವುದಿಲ್ಲ: ಪಾಕ್ ಪ್ರಧಾನಿ
ಇಸ್ಲಾಮಾಬಾದ್, ಡಿ.17 ಭಯೋತ್ಪಾದಕ
ಸಿದ್ಧಾಂತ ದೇಶದ ಮೇಲೆ ಪ್ರಾಬಲ್ಯ ಸಾಧಿಸಲು ಎಂದಿಗೂ
ಬಿಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ. ಆರ್ಮಿ ಪಬ್ಲಿಕ್ ಶಾಲೆಯಲ್ಲಿ ನಡೆದ ಹತ್ಯಾಕಾಂಡದ ಐದನೇ ವಾರ್ಷಿಕೋತ್ಸವದ
ನಿಮಿತ್ಯ ನೀಡಿದ ಸಂದೇಶದಲ್ಲಿ 'ಧರ್ಮಾಂಧ ದೃಷ್ಟಿಕೋನ'ಗಳೊಂದಿಗೆ ದೇಶವನ್ನು ಕಟ್ಟಿಹಾಕುವುದನ್ನು ಎಂದಿಗೂ
ಅನುಮತಿಸುವುದಿಲ್ಲ ಎಂದು ಹೇಳಿದ್ದಾರೆ. ಹತ್ಯಾಕಾಂಡದಲ್ಲಿ ಕೊಲ್ಲಲ್ಪಟ್ಟವರಿಗೆ ಅವರು ಗೌರವ ಸಲ್ಲಿಸಿದರು,
ಮುಗ್ಧ ಜನರ ರಕ್ತವು ಎಲ್ಲಾ ರೀತಿಯ ಭಯೋತ್ಪಾದನೆ, ಉಗ್ರವಾದ, ಹಿಂಸೆ ಮತ್ತು ದ್ವೇಷದ ವಿರುದ್ಧ ಜನರನ್ನು
ಒಂದುಗೂಡಿಸಿದೆ ಎಂದು ಹೇಳಿದರು. ಭಯೋತ್ಪಾದನೆ ವಿರುದ್ಧದ
ಹೋರಾಟದ ವೇಳೆ ಪ್ರಾಣ ಕಳೆದುಕೊಂಡ ಸಶಸ್ತ್ರ ಪಡೆ, ಪೊಲೀಸ್ ಮತ್ತು ಇತರ ಕಾನೂನು ಜಾರಿ ಸಂಸ್ಥೆಗಳ ಸೈನಿಕರನ್ನು
ಪ್ರಧಾನಿ ಶ್ಲಾಘಿಸಿದರು. ವಿಶೇಷವೆಂದರೆ, 16 ಡಿಸೆಂಬರ್
2014 ರಂದು, ಉಗ್ರರು 130 ಯುವ ವಿದ್ಯಾರ್ಥಿಗಳು ಸೇರಿದಂತೆ 150 ಜನರನ್ನು ಸೈನ್ಯದಿಂದ ನಡೆಸುವ ಎಪಿಎಸ್ನಲ್ಲಿ
ಕೊಂದರು. ಈ ಘಟನೆ ಇಡೀ ರಾಷ್ಟ್ರವನ್ನು ಬೆಚ್ಚಿಬೀಳಿಸಿತ್ತು. ಭಯೋತ್ಪಾದನೆ ಮತ್ತು ಉಗ್ರವಾದದ ವಿರುದ್ಧ
ರಾಷ್ಟ್ರೀಯ ಕ್ರಿಯಾ ಯೋಜನೆಯನ್ನು ರೂಪಿಸಲು ಮತ್ತು ಭಯೋತ್ಪಾದಕರ ಪ್ರಕರಣಗಳನ್ನು ಆಲಿಸಲು ಮಿಲಿಟರಿ
ನ್ಯಾಯಾಲಯಗಳನ್ನು ಸ್ಥಾಪಿಸಲಾಯಿತು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 