ಅಯೋಧ್ಯೆ ಭೇಟಿ ಮುಂದೂಡಿದ ಉದ್ದವ್ ಠಾಕ್ರೆ
ಅಯೋಧ್ಯೆ, ನ.18 : ಮಹಾರಾಷ್ಟ್ರದಲ್ಲಿ ಶಿವಸೇನೆಯ ಮೊದಲ ಮುಖ್ಯಮಂತ್ರಿಯಾಗಲು ಪ್ರಯತ್ನದಲ್ಲಿ ತೊಡಗಿರುವ ಪಕ್ಷದ ಮುಖ್ಯಸ್ಥ ಉದ್ದವ್ ಠಾಕ್ರೆ ಅವರು ನವೆಂಬರ್ 24 ರಂದು ತಮ್ಮ ಉದ್ದೇಶಿತ ಅಯೋಧ್ಯೆ ಭೇಟಿಯನ್ನು ಮುಂದೂಡುವ ಸಾಧ್ಯತೆ ಇದೆ. ಠಾಕ್ರೆ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯಲ್ಲಿ ನಿರತರಾಗಿದ್ದಾರೆ, ಆದ್ದರಿಂದ ಅವರ ಉದ್ದೇಶಿತ ಅಯೋಧ್ಯೆಯ ಭೇಟಿಯನ್ನು ಮುಂದೂಡಲಾಗಿದೆ ಎಂದು ಪಕ್ಷದ ಮೂಲಗಳು ಸೋಮವಾರ ತಿಳಿಸಿವೆ ಅಯೋಧ್ಯೆ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ನವೆಂಬರ್ 9ರಂದು ತೀಪು ನೀಡಿದ ನಂತರ, ಠಾಕ್ರೆ ಅವರು ನವೆಂಬರ್ 24 ರಂದು ರಾಮ್ ಲಲ್ಲಾ ಮಂದಿರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸುವುದಾಗಿ ಘೋಷಿಸಿದ್ದರು. ಸುಪ್ರೀಂಕೋರ್ಟ್ ತೀರ್ಪುನ ನಂತರ ಶಿವಸೇನೆ ಮುಖ್ಯಸ್ಥರು ಈ ದಿನವನ್ನು ದೇಶಕ್ಕೆ ಐತಿಹಾಸಿಕ ದಿನವೆಂದು ಬಣ್ಣಿಸಿದ್ದರು. ರಾಮ ಮಂದಿರ ಆಂದೋಲನಕ್ಕಾಗಿ ಸಮರ್ಪಣೆ ಮಾಡಿದ್ದಕ್ಕಾಗಿ ಧನ್ಯವಾದ ಹೇಳಲು ಬಿಜೆಪಿ ಮುಖಂಡ ಲಾಲ್ ಕೃಷ್ಣ ಅಡ್ವಾಣಿಯವರನ್ನು ಭೇಟಿ ಮಾಡುವುದಾಗಿಯೂ ಅವರು ಘೋಷಿಸಿದ್ದರು. ಆದರೆ, ಬಿಜೆಪಿ ಮತ್ತು ಶಿವಸೇನೆ ನಡುವಿನ ಸಂಬಂಧವು ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ವಿಷಯದಲ್ಲಿ ಹದಗೆಟ್ಟಿರುವುದರಿಂದ ಉಭಯ ಪಕ್ಷಗಳ ಮೈತ್ರಿ ಮುರಿದುಬಿದ್ದಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 