ಕೇಂದ್ರದ ಪರಿಹಾರ ವಿಳಂಬವಾಗಿದ್ದಕ್ಕೆ ವಿಷಾದವಿದೆ: ಸಂಸದ ಸಂಗಣ್ಣ
ಲೋಕದರ್ಶನ ವರದಿ
ಕೊಪ್ಪಳ : ನೆರೆಪೀಡಿತ ಪ್ರದೇಶಗಳ ಪರಿಹಾರಕ್ಕಾಗಿ ಕೇಂದ್ರ ಸರಕಾರ 1,200 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್, ಅಮಿತ್ಷಾ ಅಭಿನಂದನಾರ್ಹರು ಎಂದು ಕೊಪ್ಪಳದ ಸಂಸದ ಕರಡಿ ಸಂಗಣ್ಣ ತಿಳಿಸಿದರು.
ಅವರು ರವಿವಾರ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೊಷ್ಠಿಯಲ್ಲಿ ಮಾತನಾಡಿ ಕೇಂದ್ರ ಸರಕಾರವು ರಾಜ್ಯದ ನೆರೆಪೀಡಿತ ಪ್ರದೇಶಗಳ ಜನರ ಸಂಕಷ್ಟಕ್ಕೆ ಸ್ಪಂದಿಸಿ ಪ್ರಾಥಮಿಕ ಹಂತದಲ್ಲಿ ಪರಿಹಾರದ ಹಣವನ್ನು ಬಿಡುಗಡೆ ಮಾಡಿದ್ದು, ಇನ್ನೂ ನಷ್ಟವಾಗಿರುವ ಕುರಿತು ನಿಖರ ಅಂಕಿ-ಆಂಶ ಪಡೆಯುತ್ತಿದೆ. ಶೀಘ್ರವೇ ಎರಡನೇ ಹಂತದ ಅನುದಾನವೂ ಬಿಡುಗಡೆಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಟೆಕ್ನಿಕಲ್ ರಿಪೋಟರ್್ ಕೊಡುವಲ್ಲಿ ತಡವಾಗಿರುವ ಹಿನ್ನೆಲೆ, ಅನುದಾನ ಬರುವಲ್ಲಿ ವಿಳಂಭವಾಗಿದೆ ಎಂದರು.
ತಂಗಡಗಿ ಸಂಸ್ಕೃತಿ ಗೊತ್ತಿಲ್ಲ: ಇದೇ ವೇಳೆ ಬಿಜೆಪಿ ಸಂಸದರಿಗೆ ಸೀರೆ, ಬಳೆ, ಕುಂಕುಮ ಕಳಿಸುವುದಾಗಿ ಹೇಳಿದ್ದ, ಮಾಜಿ ಸಚಿವ ಶಿವರಾಜ ತಂಗಡಗಿಯವರಿಗೆ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದರು. ಸೀರೆ, ಬಳೆ, ಕುಂಕುಮ-ಇವು ಸುಮಂಗಲೆಯರ ಸಂಕೇತ. ಸಂಸ್ಕೃತಿ ಗೊತ್ತಿಲ್ಲದ ಮಾಜಿ ಮಂತ್ರಿ ತಂಗಡಗಿ ಮಹಿಳೆಯರಿಗೆ ಅಪಮಾನ ಎಸಗುವ ರೀತಿಯಲ್ಲಿ ಮಾತನಾಡಿದ್ದಾರೆ. ಮಾತೆತ್ತಿದರೆ ತಾಖತ್ ಎನ್ನುತ್ತಾರೆ. ಅಷ್ಟು ತಾಖತ್ ಇರುವ ತಂಗಡಗಿಯವರನ್ನ ಕನಕಗಿರಿ ಕ್ಷೇತ್ರದ ಜನ ಯಾಕೆ ಸೋಲಿಸಿದರು. ಬಿಜೆಪಿ ಅಭ್ಯಥರ್ಿ ಬಸವರಾಜ ದಢೇಸೂಗುರು ಅವರನ್ನ ಯಾಕೆ ಗೆಲ್ಲಿಸಿದರು ಎಂಬುದನ್ನ ಅರ್ಥ ಮಾಡಿಕೊಳ್ಳಬೇಕು. ಅಪರೂಪಕ್ಕೆ ಕೊಪ್ಪಳ ಜಿಲ್ಲೆಗೆ ಬಂದಾಗ ಇಂಥ ಹೇಳಿಕೆ ನೀಡುವ ಮೂಲಕ ಪೇಪರ್ ಟೈಗರ್ ಆಗ್ತಿದಾರೆ. ಅವರು ತಮ್ಮ ಪಕ್ಷದ ಬಗ್ಗೆ ಮಾತನಾಡಲಿ, ಪಕ್ಷದಲ್ಲಿಯೇ ವಿರೋಧ ಪಕ್ಷದ ನಾಯಕನಿಗಾಗಿ ಪೈಪೋಟಿ ನಡೆದಿದೆ. ಮೊದಲು ಪಕ್ಷ ಕಟ್ಟುವ ಕೆಲಸ ಮಾಡಲಿ.
ತಂಗಡಗಿಗೆ ಫೀಲಿಂಗ್: ಇನ್ನು ವಗರ್ಾವಣೆ ಬಗ್ಗೆ ಮಾತನಾಡಿರುವ ತಂಗಡಿ ಅವರು ತಾವು ಮಂತ್ರಿಯಿದ್ದಾಗ ಇಂತಹ ಕೆಲಸ ಮಾಡಿರಬೇಕು. ಆ ಫೀಲಿಂಗ್ನಲ್ಲಿ ಮಾತನಾಡಿರಬೇಕು ಅಂತಾ ಲೇವಡಿ ಮಾಡಿದರು. ಇನ್ನು ಕೊಪ್ಪಳ ಶಾಸಕ ರಾಘವೇಂದ್ರ ಹಿಟ್ನಾಳ ಯಾವುದೇ ಪ್ರೋಟೊಕಾಲ್ ಪಾಲಿಸುತ್ತಿಲ್ಲ. ಸಚಿವರಿಗೆ, ಸಂಸದರಿಗೆ ಮಾಹಿತಿ ನೀಡದೆ ದೊಡ್ಡ ದೊಡ್ಡ ಬ್ಯಾನರ್ ಹಾಕಿ ಕಾರ್ಯಕ್ರಮ ಮಾಡ್ತಾರೆ. ಅಭಿವೃದ್ಧಿ ಕೆಲಸಗಳಿಗೆ ಬಿಜೆಪಿ ಅಡ್ಡಿಯಾಗುವುದಿಲ್ಲ. ಪ್ರೋಟೊಕಾಲ್ ಪಾಲಿಸುವುದನ್ನ ಕಲಿಯಬೇಕು. ಇನ್ನು ಯತ್ನಾಳ ನೋಟಿಸ್ ಕುರಿತು ಪಕ್ಷದ ಆಂತರಿಕ ವಿಚಾರದಲ್ಲಿ ಪ್ರಸ್ತಾಪ ಮಾಡುಬಹುದು ಆದರೆ ಬಹಿರಂಗವಾಗಿ ಹೇಳಿಕೆಗಳನ್ನು ನೀಡಬಾರದು ಅಂತಾ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ವಿರುಪಾಕ್ಷಪ್ಪ ಸಿಂಗನಾಳ, ಮುಖಂಡರಾದ ರಾಜು ಬಾಕಳೆ, ಚಂದ್ರಶೇಖರ ಕವಲೂರ, ಗಿರೀಶಾನಂದ, ಸಜ್ಜನ್ ಉಪಸ್ಥಿತರಿದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 