ಲಾಕ್ಡೌನ್ ಸಮಯದಲ್ಲಿ ಬಡವರಿಗೆ ಉಚಿತ ಹಾಲು ನೀಡುವ ಯೋಜನೆಗೆ ಮುಖ್ಯಮಂತ್ರಿ ಚಾಲನೆ
ಬೆಂಗಳೂರು, ಏ.2, ಬಡವರಿಗೆ ಉಚಿತ ಹಾಲು ವಿತರಿಸುವ ಯೋಜನೆಗೆ ಬೆಂಗಳೂರಿನ ಅಶ್ವಥ್ ನಗರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಚಾಲನೆ ನೀಡಿದರು.ಕೆಎಂಎಫ್ನ ಹೆಚ್ಚುವರಿ ಹಾಲನ್ನು ಖರೀದಿಸಿ ಬಡವರಿಗೆ ವಿಸ್ತರಿಸುವ ಯೋಜನೆ ಇದಾಗಿದೆ. ಮುಖ್ಯಮಂತ್ರಿ ಮತ್ತು ಸಚಿವರ ತಂಡ ಈ ಪ್ರದೇಶದಲ್ಲಿ ಮನೆ ಮನೆಗೂ ತೆರಳಿ ಹಾಲು ವಿತರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು. ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಸಚಿವ ಶಿವರಾಮ್ ಹೆಬ್ಬಾರ್ ಮೊದಲಾದವರು ಮುಖ್ಯಮಂತ್ರಿಗೆ ಸಾಥ್ ನೀಡಿದರು.ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಕೊರೊನಾ ಸೋಂಕು ನಿರ್ಮೂಲನೆಗಾಗಿ ಲಾಕ್ ಡೌನ್ ಜಾರಿಯಲ್ಲಿದ್ದಾಗಲೂ ರೈತರಿಂದ ಅಬಾಧಿತವಾಗಿ ಹಾಲು ಖರೀದಿಸಲು ಕೆಎಂಎಫ್ ಗೆ ಸೂಚಿಸಲಾಗಿತ್ತು. ಹಾಗೆ ರೈತರಿಂದ ಖರೀದಿಸಲಾಗುತ್ತಿರುವ ಹಾಲಿನ ಪೈಕಿ ಸುಮಾರು 7.5 ಲಕ್ಷ ಲೀಟರ್ ಹಾಲನ್ನು ಬಡವರಿಗೆ ಉಚಿತವಾಗಿ ಹಂಚಬೇಕು ಎಂಬ ನಿರ್ಧಾರಕ್ಕೆ ಬಂದಿದ್ದೆವು. ಅದರಂತೆ ಇಂದಿನಿಂದ ಬೆಂಗಳೂರಿನ ಅಶ್ವತ್ಥ ನಗರದ ಕೊಳಗೇರಿ ನಿವಾಸಿಗಳಿಗೆ ಉಚಿತವಾಗಿ ಹಾಲು ವಿತರಿಸುವುದರ ಮೂಲಕ ಈ ವ್ಯವಸ್ಥೆಗೆ ಚಾಲನೆ ನೀಡಲಾಯಿತು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 