ರಾಜ್ಯದ ಅಭಿವೃದ್ಧಿಗೆ ದಿ. ಕೆ.ಸಿ. ರೆಡ್ಡಿ ಅವರ ಪಾತ್ರ ಅಪಾರ : ಗೋವಿಂದ ಎಂ ಕಾರಜೋಳ
ಬೆಂಗಳೂರು ಫೆ.27, ರಾಜ್ಯದ ಅಭಿವೃದ್ಧಿಗೆ ರಾಜ್ಯದ ಪ್ರಥಮ ಮುಖ್ಯಮಂತ್ರಿಗಳಾಗಿದ್ದ ದಿ. ಕೆ.ಸಿ. ರೆಡ್ಡಿ ಅವರ ಪಾತ್ರ ಅಪಾರವಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ. ಕ್ಯಾಸಂಬಳ್ಳಿ ಚೆಂಗಲರಾಯರೆಡ್ಡಿಯವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿ ಮಾತನಾಡಿದ ಅವರು, ಕೆ.ಸಿ. ರೆಡ್ಡಿ ಅವರು, ರಾಜ್ಯದ ಮುಖ್ಯಮಂತ್ರಿಯಾಗಿ ನಾಲ್ಕೂವರೆ ವರ್ಷಗಳ ಕಾಲ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ಕೇಂದ್ರ ಸಚಿವರಾಗಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ಮಧ್ಯ ಪ್ರದೇಶದ ರಾಜ್ಯಪಾಲರಾಗಿಯೂ ತಮ್ಮ ಹೆಜ್ಜೆ ಗುರುತು ದಾಖಲಿಸಿದ್ದಾರೆ ಎಂದರು. ಕೆ.ಸಿ. ರೆಡ್ಡಿ ಮಹಾತ್ಮಾ ಗಾಂಧಿ ಅವರ ದರ್ಶನ ಭಾಗ್ಯದಿಂದ ಪ್ರಭಾವಿತರಾಗಿದ್ದರು. ರಾಜ್ಯದಲ್ಲಿ ಅನೇಕ ಕಾರ್ಖಾನೆಗಳ ಸ್ಥಾಪನೆಗೆ ಕೆ. ಸಿ. ರೆಡ್ಡಿ ಅವರು ಕಾರಣೀಭೂತರಾಗಿದ್ದಾರೆ. ಬೆಂಗಳೂರಿನ ಇಂಡಿಯನ್ ಟೆಲಿಫೋನ್ ಇಂಡಸ್ಟ್ರೀಸ್ (ಐ.ಟಿ.ಐ), ಹಾಗೂ ಹಿಂದುಸ್ಥಾನ್ ಮೆಷೀನ್ ಟೂಲ್ಸ್ (ಹೆಚ್.ಎಂ.ಟಿ) ಹಾಗೂ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (ಬಿ.ಹೆಚ್.ಇ.ಎಲ್), ಮೈಸೂರಿನ ಸೆಂಟ್ರಲ್ ಫುಡ್ ಟೆಕ್ನೋಲಾಜಿಕಲ್ ರಿಸರ್ಚ್ ಇನ್ಸ್ಟಿಟ್ಯೂಟ್ (ಸಿ.ಎಫ್.ಟಿ.ಆರ್.ಐ), ಕೋಲಾರದ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (ಬಿ.ಇ.ಎಂ.ಎಲ್) ಹಾಗೂ ಶಿವಮೊಗ್ಗದ ಜೋಗ ಜಲಪಾತದಡಿಯಲ್ಲಿ ಮಹಾತ್ಮಾ ಗಾಂಧಿ ಹೈಡ್ರೋ ಎಲೆಕ್ಟ್ರಿಕ್ ಸ್ಟೇಷನ್ ಸ್ಥಾಪನೆಯಲ್ಲಿ ಕೆ. ಸಿ. ರೆಡ್ಡಿ ಅವರ ಪರಿಶ್ರಮವಿತ್ತು ಎಂಬುದು ರಾಜ್ಯದ ಅಭಿವೃದ್ಧಿಯ ಬಗ್ಗೆ ಅವರ ಕಾಳಜಿಗೆ ಧ್ಯೋತಕವಾಗಿದೆ ಎಂದು ಶ್ಲಾಘಿಸಿದರು. ಕೇಂದ್ರ ಸಚಿವರಾಗಿ ಅಂದಿನ ಮಧ್ಯಪ್ರದೇಶದ (ಇಂದಿನ ಛತ್ತೀಸ್ಗಡದ) ಬಿಲಾಯ್, ಒರಿಸ್ಸಾದ ರೂರ್ಕೆಲಾ ಮತ್ತು ಅಂದಿನ ಬಿಹಾರದ (ಇಂದಿನ ರಾಂಚಿಯಲ್ಲಿ) ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ, ತಮಿಳುನಾಡಿನ ನೈವೇಲಿಯಲ್ಲಿ ಲಿಗ್ನೈಟ್ ಕಾರ್ಖಾನೆಯ ಸ್ಥಾಪನೆಗೆ ಕಾರಣರಾಗಿ ನಾಡುಕಟ್ಟಿದವರು. ನಮ್ಮ ಹೆಮ್ಮೆಯ ಕೆ. ಸಿ. ರೆಡ್ಡಿ ಅವರುಸಮ-ಸಮಾಜವನ್ನು ಪ್ರತಿಪಾದಿಸುತ್ತಿದ್ದ ಅವರು ಯುವ ಸಮುದಾಯಕ್ಕೆ ಪ್ರೇರಣೆ ಹಾಗೂ ಸ್ಫೂರ್ತಿಯಾಗಿದ್ದಾರೆ ಎಂದು ಗೋವಿಂದ ಕಾರಜೋಳ ತಿಳಿಸಿದರು.
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ 