ಮಹಾ ಬಿಕ್ಕಟ್ಟು : ಎಲ್ಲರ ಚಿತ್ತ ಸುಪ್ರೀಂಕೋಟರ್್ ನತ್ತ
ನವದೆಹಲಿ, ನ 24 : ಮಹಾರಾಷ್ಟ್ರದಲ್ಲಿ ದೇವೇಂದ್ರ ಫಡ್ನವಿಸ್ ಅವರಿಗೆ ಸಕರ್ಾರ ರಚಿಸಲು ಅವಕಾಶ ಮಾಡಿಕೊಟ್ಟ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಕಾಂಗ್ರೆಸ್, ಎನ್ ಸಿ ಪಿ, ಶಿವಸೇನೆ ಸಲ್ಲಿಸಿರುವ ಅಜರ್ಿಯ ಬಗ್ಗೆ ಭಾನುವಾರ ಸುಪ್ರೀಂಕೋಟರ್್ ನೀಡಲಿರುವ ತೀಪು ಹಲವು ರೋಚಕ ವಿದ್ಯಮಾನಗಳಿಗೆ ಸಾಕ್ಷಿಯಾಗಲಿದೆ. ಈ ಹಿನ್ನೆಲೆಯಲ್ಲಿ ಎಲ್ಲರ ಚಿತ್ತ ಇಂದು ಸುಪ್ರೀಂಕೋಟರ್್ ನತ್ತ ನೆಟ್ಟಿದೆ.
ಭಾನುವಾರದಂದೇ ವಿಶ್ವಾಸಮತ ಸಾಬೀತುಪಡಿಸಲು ನಿದರ್ೆಶನ ನೀಡಬೇಕೆಂದು ಮೂರೂ ಪಕ್ಷಗಳು ಒತ್ತಾಯ ಮಾಡಿವೆ. ಆದರೆ ಮಹಾರಾಷ್ಟ್ರದಲ್ಲಿ ಇನ್ನೂ ಹೊಸ ವಿಧಾನಸಭೆ ರಚನೆಯಾಗಿಲ್ಲ. ಸದಸ್ಯರು ಪ್ರಮಾಣವಚನ ತೆಗೆದುಕೊಂಡಿಲ್ಲ. ಸ್ಪೀಕರ್ ಆಯ್ಕೆ ನಡೆದಿಲ್ಲ. ಹೀಗಾಗಿ ನ್ಯಾಯಾಲಯ ಬಹುಮತ ಸಾಬೀತುಪಡಿಸುವಂತೆ ಯಾರಿಗೆ ನಿದರ್ೆಶನ ಕೊಡಲಿದೆ ಎಂಬುದು ಯಕ್ಷಪ್ರಶ್ನೆಯಾಗಿದೆ.
ಒಂದು ತಿಂಗಳ ರಾಜಕೀಯ ಅನಿಶ್ಚಿತತೆ, ಬಿಕ್ಕಟ್ಟಿನ ನಂತರ ಶುಕ್ರವಾರ ರಾತ್ರಿ ನಡೆದ ನಾಟಕೀಯ, ರೋಚಕ ವಿದ್ಯಮಾನದ ನಂತರ ರಾಜ್ಯಪಾಲ ಭಗತ್ ಸಿಂಗ್ ಕೋಶಾರಿ ಅವರು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರಿಗೆ ಸಕರ್ಾರ ರಚನೆಗೆ ಆಹ್ವಾನ ನೀಡಿದ್ದು ಅದರಂತೆ ಫಡ್ನವಿಸ್ ಮುಖ್ಯಮಂತ್ರಿಯಾಗಿ, ಎನ್ ಸಿ ಪಿ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ನಂತರದ ಬೆಳವಣಿಗೆಯಲ್ಲಿ ಇದಕ್ಕೆ ಎನ್ ಸಿ ಪಿ ಯ ಸಮ್ಮತಿ ಇಲ್ಲ ಎಂದು ಹೇಳಿದ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರು ಶಾಸಕಾಂಗ ಪಕ್ಷದ ನಾಯಕನ ಸ್ಥಾನದಿಂದ ತಮ್ಮ ಸೋದರ ಸಂಬಂಧಿ ಅಜಿತ್ ಪವಾರ್ ಅವರನ್ನು ತೆಗೆದುಹಾಕಿದ್ದರು. ಈ ಹಿನ್ನೆಲೆಯಲ್ಲಿ ಕೋಟರ್್ ಇಂದು ನೀಡಲಿರುವ ತೀಪರ್ಿನ ಬಗ್ಗೆ ದೇಶದ ಜನತೆಯಲ್ಲಿ ಕಾತರ ಮತ್ತು ಕುತೂಹಲ ಹೆಚ್ಚಾಗಿದೆ.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 