ಡಿಕೆಶಿ ಭೇಟಿಯಾದ ಮುಸ್ಲಿಂ ನಿಯೋಗ
ಬೆಂಗಳೂರು, ಜೂನ್ 12,ಇದೇ ತಿಂಗಳ 29ರಂದು ನಡೆಯಲಿರುವ ಮೇಲ್ಮನೆ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಯನ್ನು ಪರಿಗಣಿಸಬೇಕೆಂದು ಕೇಂದ್ರದ ಮಾಜಿ ಸಚಿವ ಹಾಗೂ ರಾಜ್ಯಸಭೆಯ ಮಾಜಿ ಉಪ ಸಭಾಪತಿ ಕೆ.ರೆಹಮಾನ್ ಖಾನ್ ನೇತೃತ್ವದ ಮುಸ್ಲಿಂ ಮುಖಂಡರ ನಿಯೋಗ ಗುರುವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿತು.ನಿವೃತ್ತಿಯಾಗಲಿರುವ ಏಳು ಸ್ಥಾನಗಳ ಪೈಕಿ ಎರಡು ಸ್ಥಾನಗಳು ಕಾಂಗ್ರೆಸ್ ಪಾಲಾಗಲಿದ್ದು,ಎರಡು ಸ್ಥಾನಗಳಲ್ಲಿ ಒಂದನ್ನು ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ನೀಡಬೇಕೆಂದು ನಿಯೋಗದಿಂದ ಮನವಿ ಸಲ್ಲಿಸಲಾಯಿತು.ಮೇಲ್ಮನೆಗೆ ಸಲೀಂ ಅಹಮದ್, ನಾಸೀರ್ ಅಹಮದ್, ಅಬ್ದುಲ್ ಜಬ್ಬಾರ್, ಶಾಕೀರ್ ಸನದಿ ಆಕಾಂಕ್ಷಿಗಳಾಗಿದ್ದು, ನಾಸೀರ್ ಮತ್ತು ಅಬ್ದುಲ್ ಜಬ್ಬಾರ್ ಮರು ಆಯ್ಕೆ ಬಯಸಿದ್ದಾರೆ.ನಿಯೋಗದಲ್ಲಿ ರಾಜ್ಯಸಭಾ ಸದಸ್ಯ ಡಾ.ನಾಸಿರ್ ಹುಸೇನ್, ಶಾಸಕರಾದ ತನ್ವೀರ್ ಸೇಠ್, ಜಮೀರ್ ಅಹ್ಮದ್ ಖಾನ್, ಎನ್.ಎ ಹ್ಯಾರಿಸ್, ರಹೀಮ್ ಖಾನ್, ರಿಜ್ವಾನ್ ಅರ್ಷದ್ ಇದ್ದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 