ಭೂಗ್ರಹದ ಸಮೃದ್ಧ ಜೀವವೈವಿಧ್ಯತೆ ಸಂರಕ್ಷಿಸುವ ಸಂಕಲ್ಪಕ್ಕೆ ಪ್ರಧಾನಿ ಕರೆ
ನವದೆಹಲಿ, ಜೂನ್ 5, ಭೂಗ್ರಹದಲ್ಲಿನ ಸಸ್ಯ ಮತ್ತು ಪ್ರಾಣಿ-ಪಕ್ಷಿ ಸಂಕುಲವನ್ನು ಸಂರಕ್ಷಿಸುವಂತೆ ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ಶುಕ್ರವಾರ ಜನತೆಗೆ ಕರೆ ನೀಡಿದ್ದಾರೆ. ‘ನಮ್ಮ ಭೂಗ್ರಹದ ಸಮೃದ್ಧ ಜೀವವೈವಿಧ್ಯತೆಯನ್ನು ಕಾಪಾಡುವ ನಮ್ಮ ಸಂಕಲ್ಪವನ್ನು ನಾವು ಪುನರುಚ್ಚರಿಸುತ್ತೇವೆ. ಸಸ್ಯ ಮತ್ತು ಪ್ರಾಣಿ-ಪಕ್ಷಿ ಸಂರಕ್ಷಿಸಲು ಒಟ್ಟಾಗಿ ಸಾಧ್ಯವಾದಷ್ಟು ಕೆಲಸ ಮಾಡೋಣ. ಮುಂದಿನ ಪೀಳಿಗೆಗೆ ಇನ್ನೂ ಉತ್ತಮ ಪರಿಸರದ ಮತ್ತು ಸಮೃದ್ಧ ಜೀವವೈವಿಧ್ಯತೆಯ ಭೂಮಿಯನ್ನು ಕಾಪಾಡೋಣ' ಎಂದು ದೇಶಕ್ಕೆ ನೀಡಿದ ಸಂದೇಶದಲ್ಲಿ ನರೇಂದ್ರಮೋದಿ ಹೇಳಿದ್ದಾರೆ. ವಿಶ್ವ ಪರಿಸರ ದಿನವನ್ನು ಪ್ರತಿವರ್ಷ ಜೂನ್ 5 ರಂದು ಆಚರಿಸಲಾಗುತ್ತದೆ. ನಮ್ಮ ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮಗಳನ್ನು ಉತ್ತೇಜಿಸುವ ವಿಶ್ವಸಂಸ್ಥೆಯ ಪ್ರಮುಖ ವಾಹಕ ಇದಾಗಿದೆ.1974 ರಲ್ಲಿ ಮೊದಲ ಬಾರಿಗೆ ನಡೆದ ಈ ದಿನವನ್ನು ಆಚರಿಸಲಾಯಿತು. ಪರಿಸರ ಸಮಸ್ಯೆಗಳಿಂದ ಸಮುದ್ರ ಮಾಲಿನ್ಯ, ಜನಸಂಖ್ಯೆ ಏರಿಕೆ ಮತ್ತು ಜಾಗತಿಕ ತಾಪಮಾನ ಏರಿಕೆ, ಸುಸ್ಥಿರ ಬಳಕೆ ಮತ್ತು ವನ್ಯಜೀವಿ ಮೇಲಿನ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುವ ಪ್ರಮುಖ ಅಭಿಯಾನವಾಗಿ ಈ ದಿನವನ್ನು ಆಚರಿಸಲಾಗುತ್ತದೆ.
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್ 