ಸಮಾಜಮುಖಿ ಕಾರ್ಯವೇ ರೋಟರಿ ಸಂಸ್ಥೆ ಗುರಿ
ಅಥಣಿ(ಶಿವಪುತ್ರ ಯಾದವಾಡ): ಸಮಾಜಮುಖಿ ಕಾರ್ಯವೇ ರೋಟರಿ ಸಂಸ್ಥೆ ಗುರಿ ಎಂದು ರೋಟರಿ ಕ್ಲಬ್ ಅಧ್ಯಕ್ಷ ಶ್ರೀಕಾಂತ ಕುಲಕರ್ಣಿ ಮಾತನಾಡುತ್ತಾ ಅಥಣಿ ತಾಲೂಕಿನಲ್ಲಿ ಎರಡು ದಶಕಗಳಿಂದ ರೋಟರಿ ಸಂಸ್ಥೆ ಸಮಾಜಮುಖಿ ಕಾರ್ಯ ಮಾಡುತ್ತ ಮುಂದೆ ಸಾಗಿದೆ. ಇಂದಿನ ವಿದ್ಯಾರ್ಥಿಗಳು ಸಮಾಜ ಕಾರ್ಯಗಳಲ್ಲಿ ತೋಡಗಬೇಕಾದರೆ , ತಮ್ಮ ಕಲಿಕೆಯೊಂದಿಗೆ ಸಮಾಜ ಸೇವೆಯನ್ನು ರುಡಿಸಿಕೊಳ್ಳಬೇಕು. ಎಂದು ಕಿವಿ ಮಾತು ಹೇಳಿದರು.
ಸ್ಥಳಿಯ ರಾಷ್ಟ್ರ ಪ್ರಶಸ್ತಿ ಭೂಷಿತ ವಿಮೋಚನಾ ಸಂಸ್ಥೆಯ ಸಂತರಾಮ ಪಿಯು ಮಹಾವಿದ್ಯಾಲಯದಲ್ಲಿ ಸಮಾಜ ಸೇವೆಯಲ್ಲಿ ತೋಡಗಿರುವ ರೋಟರಿ ಸಂಸ್ಥೆಯ ಅಂಗ ಸಂಸ್ಥೆಯಾದ ರೋಟ್ರ್ಯಾಕ್ಟ ಕ್ಲಬ್ ಇದರ ನೂತನ ಸದಸ್ಯರ ಪದಗ್ರಹನ ಸಮಾರಂಭ ನಡೆಯಿತು. ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಡಾ ಆನಂದ ಕುಲಕರ್ಣಿ ರೋಟ್ರ್ಯಾಕ್ಟ ಕ್ಲಬ್ ಜಿಲ್ಲಾಪ್ರತಿನಿಧಿ ರಾಹುಲ ಮೋಹಿತ, ಪ್ರಾಚಾರ್ಯ ಭಾರತಿ ಬಿಜಾಪುರೆ ಮಾತನಾಡಿದರು.
ರೋಟ್ರ್ಯಾಕ್ಟ ಕ್ಲಬ ಅಧ್ಯಕ್ಷರಾಗಿ ದೀಪಾ ಬಳ್ಳಿಗೇರಿ, ಕಾರ್ಯದರ್ಶಿಯಾಗಿ ದಾನೇಶ್ವರಿ ಚಿಮ್ಮಡ, ಖಜಾಂಚಿಯಾಗಿ ಮಂಜುಳಾ, ಉಪಾಧ್ಯಕ್ಷರಾಗಿ ತೋಹಿದ ಬಾಲದಾರ ಸೇರಿ 15 ವಿದ್ಯಾರ್ಥಿಗಳು ನಿರ್ದೇಶಕರಾಗಿ ಪದಗ್ರಹಣ ಸ್ವೀಕರಿಸಿದರು. ರೋಟರಿ ಕ್ಲಬ್ ಹಿರಿಯ ಸದಸ್ಯರು ಬಾಲಚಂದ್ರ ಬುಕಿಟಗಾರ, ಸಚಿನ ದೇಸಾಯಿ, ಮೇಗರಾಜ ಪರಮಾರ, ಡಾ ಅಮೃತ ಕುಲಕಣರ್ಣಿ, ಶಿವಾನಂದ ಕಾರೆ ಹಾಗೂ ಕ್ಲಬಿನ ಇತರ ಸದಸ್ಯರು ಮತ್ತು ವಿಮೋಚನ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ
ಹಳೆ ವೈಷಮ್ಯ : ಬೆಳಗಾವಿಯಲ್ಲಿ ಯುವಕನ ಕೊಚ್ವಿ ಹತ್ಯೆ 