ಆಳಂದಿಗೆ ರವಾನೆಯಾದ ಅಂಕಲಿಯ ಸರ್ಕಾರ್ ಕುಟುಂಬದ ಮಾನದ ಕುದುರೆ

ಆಳಂದಿಗೆ ರವಾನೆಯಾದ ಅಂಕಲಿಯ ಸರ್ಕಾರ್ ಕುಟುಂಬದ ಮಾನದ ಕುದುರೆ  The Sarkar family's prized horse, which was sent to the slave

ಲೋಕದರ್ಶನ ವರದಿ 

ಮಾಂಜರಿ 27 : ಸಮೀಪದ ಅಂಕಲಿ ಗ್ರಾಮದ ಅಂಕಲಿಕರ ಕಿತೋಳೆ ಸರಕಾರ ಕುಟುಂಬದವರ ಮಾನದ ಕುದುರೆಯು ದಿನಾಂಕ ಜುಲೈ 25 ರಂದು ಜರುಗಲಿರುವ ಪಂಡರಪೂರದ ಆಷಾಢ ಏಕಾದಶಿ ಅಂಗವಾಗಿ ಅಂಕಲಿಯಿಂದ ಮಹಾರಾಷದ ಸುಕೇತ್ರ ದೇವು ಅಳಂದಿಗೆ ಶನಿವಾರ 8 ರಂದು ಮುಂಜಾನೆ ರವಾನೆಯಾಯಿತು. ಪ್ರತಿ ವರ್ಷ ಆಷಾಢ ಮಾಸದ ಏಕಾದಶಿ ದಿನದಂದು ನಡೆಯುವ ಪಂಡರಪೂರದ ವಿಠಲನ ಜಾತ್ರೆಯಲ್ಲಿ ಅಂಕಲಿ ಸರಕಾರರ ಮಾನದ ಕುದುರೆಗೆ ಮಹತ್ವದ ಸ್ಥಾನ ನೀಡುತ್ತಾರೆ. ಈ ವರ್ಷ ಜುಲೈ 25 ರಂದು ಪಂಡರಪೂರದಲ್ಲಿ ನಡೆಯಲಿರುವ ಆಷಾಢ ಏಕಾದಶಿ ನಿಮಿತ್ಯ ಸುಕ್ಷೇತ್ರ. ದೇವು ಆಳಂದಿಯಿಂದ ನಡೆಯಲಿರುವ ಭವ್ಯ ಪಾದಯಾತ್ರೆಯಲ್ಲಿ ಅಂಕಲಿ ಸರಕಾರರ ಈ ಮಾನದ ಕುದುರೆ ಪಾಲ್ಗೊಳ್ಳಲಿದೆ. ಪಾರಂಭದಲ್ಲಿ ಇಂದು ಶನಿವಾರ ಮುಂಜಾನೆ ಅಂಕಲಿ ಸರಕಾರ ಉರ್ಜಿತಶಿಂಹ ರಾಜೆ ಶೀತೋಳೆ ಸರಕಾರ ಮತ್ತು ಮಹದಜಿರಾಜೆ ಶೀತೋಳೆ ಸರಕಾರ ಚೀಕೋಡಿ ಸದಲಗಾ ಶಾಸಕ ಗಣೇಶ್ ಹುಕ್ಕೇರಿ ಮಾನದ ಕುದುರೆಯ ಪೂಜೆ ಸಲ್ಲಿಸಿದನಂತರ ಗ್ರಾಮದಲ್ಲಿ ಮೆರವಣಿಗೆ ಮಾಡಿ ಬೀಳ್ಕೊಟ್ಟರು.